ಬ್ರೇಕಿಂಗ್ ನ್ಯೂಸ್
23-12-20 12:17 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಯಶಸ್ವಿ ನಟ ಆಯುಷ್ಮಾನ್ ಖುರಾನ ಇದೀಗ ಡಾಕ್ಟರ್ ಆಗಿದ್ದಾರೆ. ಅಂದಹಾಗೆ ಸಿನಿಮಾ ಬಿಟ್ಟು ವೈದ್ಯಕೀಯ ವೃತ್ತಿ ಆರಂಭಿಸಿದ್ರಾ ಅಂತ ಅಚ್ಚರಿ ಪಡಬೇಡಿ, ಆಯುಷ್ಮಾನ್ ಡಾಕ್ಟರ್ ಆಗಿದ್ದು ಸಿನಿಮಾದಲ್ಲಿ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ, ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಆಯುಷ್ಮಾನ್ ಬಾಲಿವುಡ್ ನ ಸ್ಟಾರ್ ನಟರ ಸಾಲಿನಲ್ಲಿದ್ದಾರೆ.
ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಆಯುಷ್ಮಾನ್ ಇದೀಗ ಡಾಕ್ಟರ್ ಆಗಿ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೌದು, ಆಯುಷ್ಮಾನ್ ಹೊಸ ಸಿನಿಮಾಗೆ 'ಡಾಕ್ಟರ್ ಜಿ' ಎಂದು ಟೈಟಲ್ ಇಡಲಾಗಿದೆ. ಡಾಕ್ಟರ್ ಜಿ ಕಾಮಿಡಿ ಸಿನಿಮಾವಾಗಿದೆ. ಈ ಬಗ್ಗೆ ಮಾತನಾಡಿರುವ ಆಯುಷ್ಮಾನ್, ಇದೊಂದು ಫ್ರೆಶ್ ಕಥೆಯಾಗಿದ್ದು, ತುಂಬಾ ಇಷ್ಟವಾಗಿದೆ. ಮೊದಲ ಬಾರಿಗೆ ಡಾಕ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೀನಿ. ಈ ಸಿನಿಮಾದಲ್ಲಿ ನಟಿಸಲು ಸಖತ್ ಎಕ್ಸಾಯಿಟ್ ಆಗಿದ್ದೀನಿ ಎಂದು ಹೇಳಿದ್ದಾರೆ.
ವಿಶೇಷ ಎಂದರೆ ಚಿತ್ರಕ್ಕೆ ಅನುರಾಗ್ ಕಶ್ಯಪ್ ಸಹೋದರಿ ಅನುಭೂತಿ ಕಶ್ಯಪ್ ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಿರು ಸಿನಿಮಾಗಳನ್ನು ಮಾಡಿರುವ ಅನುಭೂತಿ ಕಶ್ಯಪ್ ಡಾಕ್ಟರ್ ಜಿ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕಿಯಾಗಿ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.
ಜಂಗ್ಲಿ ಪಿಕ್ಟರ್ಸ್ ಸಿನಿಮಾಗೆ ಬಂಡವಾಳ ಹೂಡುತ್ತಿದೆ. ಈ ಹಿಂದೆ ಬರೇಲಿ ಕೀ ಬರ್ಫಿ, ಬದಾಯಿ ಹೋ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಈ ಸಂಸ್ಥೆ ಮತ್ತ ಆಯುಷ್ಮಾನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಸಿನಿಮಾ ಅನೌನ್ಸ್ ಮಾಡಿರುವ ಚಿತ್ರತಂಡ ಉಳಿದ ಪಾತ್ರ ವರ್ಗವನ್ನು ಸದ್ಯದಲ್ಲೇ ಬಹಿರಂಗ ಪಡಿಸಲಿದೆ. ಸಿನಿಮಾ ಮುಂದಿನ ವರ್ಷ ಸೆಟ್ಟೇರಲಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am