ಬ್ರೇಕಿಂಗ್ ನ್ಯೂಸ್
24-12-20 02:34 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.24: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ನಿನ್ನೆ (ಡಿಸೆಂಬರ್ 24) ರಾತ್ರಿ ರಾಗಿಣಿ ಆರೋಗ್ಯದಲ್ಲಿ ವ್ಯತ್ಯವಾಗಿದ್ದು, ಕೂಡಲೇ ಅವರನ್ನು ಜೈಲಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರಾಗಿಣಿ ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರಾದರೂ, ನಿನ್ನೆ ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟಿ ರಾಗಿಣಿಯನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆಪ್ಟೆಂಬರ್ 4 ರಂದು ಬಂಧಿಸಿದ್ದರು. ಆರಂಭದಲ್ಲಿ ಕೆಲ ದಿನ ಸಿಸಿಬಿ ವಶದಲ್ಲಿದ್ದ ರಾಗಿಣಿ ನಂತರ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರಾಗಿಣಿ ನಂತರ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿಗೆ ಕೆಲವು ದಿನಗಳ ಮುಂಚೆಯಷ್ಟೆ ಜಾಮೀನು ದೊರೆತಿದೆ.
ಸಂಜನಾ ಗಲ್ರಾನಿಯು ಆರೋಗ್ಯ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕಿದ್ದರು, ಅಂತೆಯೇ ಆರೋಗ್ಯ ವಿಷಯದ ಆಧಾರದಲ್ಲಿ ಸಂಜನಾ ಗೆ ಜಾಮೀನು ನೀಡಲಾಗಿದೆ. ಇದೀಗ ರಾಗಿಣಿಗೂ ಆರೋಗ್ಯ ಸಮಸ್ಯೆ ಎದುರಾಗಿದ್ದು, ರಾಗಿಣಿಯೂ ಸಹ ಆರೋಗ್ಯದ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm