ಬ್ರೇಕಿಂಗ್ ನ್ಯೂಸ್
26-12-20 02:09 pm Source: FILMIBEAT Manjunatha C ಸಿನಿಮಾ
ಆಘಾತಕಾರಿ ಘಟನೆಯಲ್ಲಿ ಮಲಯಾಳಂ ನ ಜನಪ್ರಿಯ ನಟ ಅನಿಲ್ ನೆಡುಮಂಗದ್, ಚಿತ್ರೀಕರಣದ ವೇಳೆ ನೀರಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. 'ಅಯ್ಯಪ್ಪನುಂ ಕೋಶಿಯುಂ' ಸೇರಿ ಹಲವಾರು ಜನಪ್ರಿಯ ಮಲಯಾಳಂ ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದ ಅನಿಲ್ ನೆಡುಮಂಗದ್, ಇಂದು (ಡಿಸೆಂಬರ್ 25) ಮಲನ್ಕರ ಡ್ಯಾಂನಲ್ಲಿ ನೀರಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಮಲನ್ಕರ್ ಡ್ಯಾಂ ಬಳಿ ಮಲಯಾಳಂ ಸಿನಿಮಾ 'ಪೀಸ್' ನ ಚಿತ್ರೀಕರಣ ನಡೆಯುತ್ತಿತ್ತು. ಅನಿಲ್ ನೆಡುಮಂಗದ್ ಸಿನಿಮಾದಲ್ಲಿ ಪಾತ್ರವಹಿಸಿದ್ದು, ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಚಿತ್ರೀಕರಣದ ಬಿಡುವಿನ ವೇಳೆ ಅನಿಲ್ ಹಾಗೂ ಕೆಲವರು ಸ್ನಾನ ಮಾಡಲೆಂದು ಮಲನ್ಕರ ಡ್ಯಾಂ ಗೆ ಹೋಗಿದ್ದರು, ಈ ವೇಳೆ ಅನಿಲ್ ನೀರಲ್ಲಿ ಮುಳುಗಿದ್ದಾರೆ.
ಸಂಜೆ ಆರು ಗಂಟೆಗೆ ದೊರೆತಿದೆ ಮೃತದೇಹ
'ಅನಿಲ್ ಗೆಳೆಯರು ಹೇಳಿರುವಂತೆ, ಮಧ್ಯಾಹ್ನದ ವೇಳೆಗೆ ಎಲ್ಲರೂ ಸ್ನಾನ ಮಾಡಲು ಹೋದೆವು, ಕೆಲವು ಹೊತ್ತಿನ ಬಳಿಕ ಅನಿಲ್ ಅಲ್ಲೆಲ್ಲೂ ನಮಗೆ ಕಾಣಲಿಲ್ಲ, ಅನಿಲ್ ನೀರಲ್ಲಿ ಮುಳುಗಿರಬಹುದು ಎಂದು ಕೊಂಡು ಎಲ್ಲರೂ ಸೇರಿ ಹುಡುಕಾಡಲು ಆರಂಭಿಸಿದೆವು, ಕೊನೆಗೆ ರಕ್ಷಣಾ ತಂಡದ ನೆರವು ಪಡೆದು ಹುಡುಕಿದಾಗ, ಸಂಜೆ 6 ಗಂಟೆ ವೇಳೆಗೆ ಅನಿಲ್ ಮೃತದೇಹ ಸಿಕ್ಕಿತು' ಎಂದಿದ್ದಾರೆ.
ತೀವ್ರ ಸಂತಾಪ ವ್ಯಕ್ತಪಡಿಸಿದ ಪೃಥ್ವಿರಾಜ್ ಸುಕುಮಾರ್
ಪ್ರತಿಭಾವಂತ ನಟ ಅನಿಲ್ ಸಾವಿಗೆ ಮಲಯಾಳಂ ಸಿನಿಮಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಅಯ್ಯಪ್ಪನುಂ ಕೋಶಿಯುಂ ನಲ್ಲಿ ಅನಿಲ್ ಜೊತೆ ನಟಿಸಿದ್ದ ಪೃಥ್ವಿರಾಜ್ ಟ್ವೀಟ್ ಮಾಡಿದ್ದು, 'ನನ್ನ ಬಳಿ ಹೇಳಲು ಏನೂ ಮಾತುಗಳಿಲ್ಲ. ನನಗೆ ಏನೂ ಹೇಳಲು ಆಗುತ್ತಿಲ್ಲ. ನೀನು ಶಾಂತಿಯಿಂದ ಇದ್ದೀಯ ಎಂದು ಭಾವಿಸಿದ್ದೇನೆ ಅನಿಲ್ ಅಣ್ಣ' ಎಂದಿದ್ದಾರೆ.
ಕಮ್ಮಾಟಿಪದಂ' ಸಿನಿಮಾದಲ್ಲಿ ಜೊತೆಗೆ ನಟನೆ
'ಕಮ್ಮಾಟಿಪದಂ' ಸಿನಿಮಾದಲ್ಲಿ ಅನಿಲ್ ಜೊತೆ ನಟಿಸಿದ್ದ ಸ್ಟಾರ್ ನಟ ದುಲ್ಕರ್ ಸಲ್ಮಾನ್, 'ಹೃದಯ ಹಿಂಡಿದಂತಾಗಿದೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅನಿಲ್ ಆತ್ಮಕ್ಕೆ ಶಾಂತಿ ಸಿಗಲಿ. ಆತನ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆಗಳಿವೆ' ಎಂದಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am