ಬ್ರೇಕಿಂಗ್ ನ್ಯೂಸ್
26-12-20 02:20 pm Source: FILMIBEAT Manjunatha C ಸಿನಿಮಾ
ಬೆಂಗಳೂರು, ಡಿ.26: ಡ್ರಗ್ಸ್ ಪ್ರಕರಣದ ಆರೋಪಿ ನಟಿ ಸಂಜನಾ ಗಲ್ರಾನಿ ಇಂದು ಸಿಸಿಬಿ ಪೊಲೀಸರ ಮುಂದೆ ಹಾಜರಾದರು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿ, ಕೆಲವು ದಿನಗಳ ಹಿಂದಷ್ಟೆ ಆರೋಗ್ಯ ಕಾರಣ ನೀಡಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದಾರೆ. ಜಾಮೀನು ನೀಡಿದ್ದ ನ್ಯಾಯಾಲಯವು, ಸಂಜನಾ ಗೆ ಕೆಲವು ಷರತ್ತುಗಳನ್ನು ವಿಧಿಸಿತ್ತು, ಜಾಮೀನು ಅವಧಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಬೇಕು ಎಂದು ಸಹ ಷರತ್ತು ವಿಧಿಸಲಾಗಿತ್ತು. ಆ ಷರತ್ತಿನ ಅನ್ವಯ ಇಂದು ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದರು.

ಸೆಪ್ಟೆಂಬರ್ 8 ರಂದು ನಟಿ ಸಂಜನಾ ಗಲ್ರಾನಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀರು ಬಂಧಿಸಿದ್ದರು. ಅವರನ್ನು ಪರಪ್ಪರ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಡಿಸೆಂಬರ್ 11 ರಂದು ಕರ್ನಾಟಕ ರಾಜ್ಯ ಹೈಕೋರ್ಟ್ ಸಂಜನಾ ಗೆ ಜಾಮೀನು ಮಂಜೂರು ಮಾಡಿದೆ. ಕೆಲವು ಷರತ್ತುಗಳನ್ನು ಸಹ ಸಂಜನಾ ಗೆ ವಿಧಿಸಲಾಗಿದೆ. ಮೂರು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಇಬ್ಬರ ಶ್ಯೂರಿಟಿ ನೀಡುವುದರ ಜೊತೆಗೆ. ಪ್ರತಿ ತಿಂಗಳು ಎರಡು ಬಾರಿ ಪೊಲೀಸ್ ಠಾಣೆಗೆ ಹಾಜರಾಗಬೇಕು ಹಾಗೂ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಕಾರ್ಯ ಮಾಡದೆ ವಿಚಾರಣೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ಸಂಜನಾಗೆ ಜಾಮೀನು ಮಂಜೂರು ಮಾಡಲಾಗಿದೆ.
ಸಂಜನಾ ಗಲ್ರಾನಿಗಿಂತಲೂ ಮೊದಲು ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿಗೆ ಈ ವರೆಗೆ ಜಾಮೀನು ದೊರೆತಿಲ್ಲ. ರಾಗಿಣಿ ಗೆ ಇತ್ತೀಚೆಗೆ ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm