ಬ್ರೇಕಿಂಗ್ ನ್ಯೂಸ್
28-12-20 12:44 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಕಡೆ ಹೊರಟಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾರಂಗದಲ್ಲಿ ಬ್ಯುಸಿ ಇರುವ ರಶ್ಮಿಕಾ ಇತ್ತೀಚಿಗಷ್ಟೆ ಹಿಂದಿ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಮಿಷನ್ ಮಜ್ನು ಮೂಲಕ ರಶ್ಮಿಕಾ ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ. ಇದರ ಬೆನ್ನಲ್ಲೇ ಈಗ ಮತ್ತೊಂದು ಬಾಲಿವುಡ್ ಸಿನಿಮಾದಲ್ಲಿ ಕಿರಿಕ್ ಸುಂದರಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಬಾಲಿವುಡ್ ನ ಲೆಜೆಂಡ್ ಅಮಿತಾಬ್ ಬಚ್ಚನ್ ಜೊತೆ ನಟಿಸಲು ರಶ್ಮಿಕಾ ಸಜ್ಜಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

ಅಮಿತಾಬ್ ಮಗಳ ಪಾತ್ರದಲ್ಲಿ ರಶ್ಮಿಕಾ
ರಶ್ಮಿಕಾ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ನಟಿಸುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಅಮಿತಾಬ್ ಬಚ್ಚನ್ ಮಗಳ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳುತ್ತಿದ್ದಾರಂತೆ. ಈ ಬಗ್ಗೆ ರಶ್ಮಿಕಾ ಕಡೆಯಿಂದ ಆಗಲಿ ಅಥವಾ ಸಿನಿಮಾತಂಡದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಅಮಿತಾಬ್ ಸಿನಿಮಾದಲ್ಲಿ ರಶ್ಮಿಕಾ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವಿಕಾಸ್ ಬಾಹ್ಲ್ ನಿರ್ದೇಶನ
ಅಮಿತಾಬ್ ಮತ್ತು ರಶ್ಮಿಕಾ ಸಿನಿಮಾಗೆ ನಿರ್ದೇಶಕ ವಿಕಾಸ್ ಬಹ್ಲ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಕ್ವೀನ್, ಸೂಪರ್ 30 ಅಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ವಿಕಾಶ್, ಇದೀಗ ರಶ್ಮಿಕಾ ಅವರ ಜೊತೆ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

'ಡೆಡ್ಲಿ' ಎನ್ನುವ ತಾತ್ಕಾಲಿಕ ಟೈಟಲ್
ಚಿತ್ರಕ್ಕೆ ತಾತ್ಕಾಲಿಕವಾಗಿ ಡೆಡ್ಲಿ ಎಂದು ಹೆಸರಿಡಲಾಗಿದೆ. ಈ ಸಿನಿಮಾ ಅಪ್ಪ ಮತ್ತು ಮಗಳ ಸಂಬಂಧದ ಬಗ್ಗೆ ಇರುವ ಕಥೆಯಾಗಿದೆ. ಕಾಮಿಡಿ ಕಥಾಹಂದರ ಹೊಂದಿರುವ ಈ ಸಿನಿಮಾಗೆ ರಿಲಯನ್ಸ್ ಎಂಟರ್ ಟೈನ್ ಮೆಂಟ್ ನಿರ್ಮಾಣ ಮಾಡುತ್ತಿದೆ. ಸದ್ಯ ಸಿನಿಮಾ ಪ್ರಿ ಪ್ರೊಡಕ್ಷನ್ ಕೆಲಸ ಜೋರಾಗಿ ನಡೆಯುತ್ತಿದ್ದು, ಸಿನಿಮಾ ಮುಂದಿನ ವರ್ಷ 2021ರಲ್ಲಿ ಸೆಟ್ಟೇರಲಿದೆ.

ಮಿಷನ್ ಮಜ್ನು ಸಿನಿಮಾದಲ್ಲಿ ರಶ್ಮಿಕಾ
ರಶ್ಮಿಕಾ ಈಗಾಗಲೇ ಮಿಷನ್ ಮಜ್ನು ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಿದ್ಧಾರ್ಥ್ ಮಲ್ಹೋತ್ರ ಜೊತೆ ನಟಿಸುತ್ತಿದ್ದಾರೆ. 1970ರ ಕಾಲಘಟ್ಟದ ನೈಜ ಘಟನೆಯಿಂದ ಪ್ರೇರೇಪಿತ ಚಿತ್ರ ಇದಾಗಿದ್ದು, ಪಾಕಿಸ್ತಾನದಲ್ಲಿರುವ ಭಾರತದ ಅತ್ಯಂತ ಧೈರ್ಯಶಾಲಿ ರಾ ಕಾರ್ಯಚರಣೆ ಬಗ್ಗೆ ಇರುವ ಸಿನಿಮಾವಾಗಿದೆ. ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ರಹಸ್ಯ ಕಾರ್ಯಚರಣೆ ಬಗ್ಗೆ ಇರುವ ಸಿನಿಮಾ ಇದಾಗಿದೆ.
This News Article is a Copy of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm