ಬ್ರೇಕಿಂಗ್ ನ್ಯೂಸ್
28-12-20 02:22 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.28: ಸ್ಯಾಂಡಲ್ ವುಡ್ ನ ದೂದ್ ಪೇಡ ಅಂತಲೇ ಖ್ಯಾತಿಗಳಿಸಿರುವ ನಟ ದಿಗಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 36ನೇ ವಸಂತಕ್ಕೆ ಕಾಲಿಟ್ಟಿರುವ ನಟ ದಿಗಂತ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದಿಗಂತ್ ಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸಾಮಾಜಿಕ ಜಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಅಂದಹಾಗೆ ದಿಗಂತ್ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ 'ಮಾರಿ ಗೋಲ್ಡ್' ಸಿನಿಮಾತಂಡ. ಹೌದು, ದಿಗಂತ್ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ ಮಾರಿ ಗೋಲ್ಡ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಗನ್ ಮತ್ತು ಗೋಲ್ಡ್ ಜೊತೆ ರಕ್ತ ಸಿಕ್ತ ದಿಗಂತ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ರಾಘವೇಂದ್ರ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಮಾರಿ ಗೋಲ್ಡ್ ಸಿನಿಮಾ ಸಡನ್ನಾಗಿ ಗೋಲ್ಡ್ ಬೆಸ್ಕೇಟ್ ಸಿಕ್ಕಿದರೆ ಏನಾಗುತ್ತೆ? ಎನ್ನುವುದರ ಸುತ್ತ ಸುತ್ತುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದಯಂತೆ. ಇಲ್ಲಿ ಕಾಮಿಡಿ ಮತ್ತು ಲವ್ ಗೂ ಅಷ್ಟೆ ಪ್ರಾಮುಖ್ಯತೆ ಕೊಡಲಾಗಿದೆ. ಚಿತ್ರದಲ್ಲಿ ದಿಗಂತ್ ಗೆ ನಾಯಕಿಯಾಗಿ ಸಂಗೀತ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಚಿತ್ರೀಕರಣ ಮುಗಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಅಂದಹಾಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಮಲೆನಾಡಿನಲ್ಲಿ ಕೊನೆ ಕೊಯ್ಲು ಮಾಡುತ್ತಾ ಪತ್ನಿ ಜೊತೆ ಜಾಲಿ ಟ್ರಿಪ್ ಮಾಡುತ್ತಿದ್ದಾರೆ. ಈ ನಡುವೆ ಸಿನಿಮಾಗಳ ಚಿತ್ರೀಕರದಲ್ಲೂ ಭಾಗಿಯಾಗುತ್ತಿದ್ದಾರೆ. ಮಾರಿ ಗೋಲ್ಡ್ ಸಿನಿಮಾಗಳ ಜೊತೆಗೆ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ಹುಟ್ಟುಹಬ್ಬದ ಶುಭಾಶಯಗಳು, ಗಾಳಿಪಟ-2, ವೇರ್ ಈಸ್ ಮೈ ಕನ್ನಡಕ, ಯುವರತ್ನ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ದಿಗಂತ್ ಕ್ಷಮಿಸಿ ನನ್ನ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಮುಗಿಸಿ, ಗಾಳಿಪಟ-2 ಚಿತ್ರಕ್ಕಾಗಿ ವಿದೇಶಕ್ಕೆ ಹೊರಡಲಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm