ಬ್ರೇಕಿಂಗ್ ನ್ಯೂಸ್
29-12-20 12:18 pm Source: FILMIBEAT Shruthi Gk ಸಿನಿಮಾ
ಮುಂಗಾರು ಮಳೆ.. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಬಂದ ಮುಂಗಾರು ಮಳೆ ಸಿನಿಮಾಗೆ ಕನ್ನಡ ಸಿನಿಪ್ರಿಯರು ಮನ ಸೋತಿದ್ದರು. ಚಿತ್ರದ ಕಥೆ, ಡೈಲಾಗ್, ಗಣೇಶ್ ಅಭಿನಯ, ಲೊಕೇಶನ್, ಮಳೆ, ಅದ್ಭುತವಾದ ಸಂಗೀತಕ್ಕೆ ಪ್ರೇಕ್ಷಕರು ತಲೆಬಾಗಿದ್ದರು. 2006ರಲ್ಲಿ ರಿಲೀಸ್ ಆದ ಮುಂಗಾರು ಮಳೆ ಸಿನಿಮಾಗೆ ಈಗ 14 ವರ್ಷದ ಸಂಭ್ರಮ. ಹೌದು, ಇವತ್ತಿಗೆ ಸರಿಯಾಗಿ 14 ವರ್ಷಗಳ ಹಿಂದೆ ಮುಂಗಾರು ಮಳೆ ಸಿನಿಮಾ ರಿಲೀಸ್ ರಾಜ್ಯದಾದ್ಯಂತ ಬಿಡುಗೆಯಾಗಿತ್ತು.
ಗಣೇಶ್ ಗೆ ಸ್ಟಾರ್ ಗಿರಿ ತಂದುಕೊಟ್ಟ ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಯಶಸ್ಸು ಕಂಡ ಮುಂಗಾರು ಮಳೆ ಚಿತ್ರ, ಗಣೇಶ್ ಸಿನಿ ಬದುಕನ್ನೇ ಬದಲಾಯಿಸಿದ ಸಿನಿಮಾವಾಗಿದೆ. ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಈ ಸಿನಿಮಾ ಮೂಲಕ ರಾತ್ರೋ ರಾತ್ರಿ ಸ್ಟಾರ್ ಆಗಿ ಹೊರಹೊಮ್ಮಿದರು. ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಸ್ಟಾರ್ ಗಿರಿ ತಂದುಕೊಟ್ಟ ಚಿತ್ರವಿದು.

ಪೂಜಾ ಗಾಂಧಿ ನಟನೆಯ ಚೊಚ್ಚಲ ಸಿನಿಮಾ
ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಪೂಜಾ ಗಾಂಧಿ ಕಾಣಿಸಿಕೊಂಡಿದ್ದಾರೆ. ಪೂಜಾ ಗಾಂಧಿಗೆ ಇಂದು ಚೊಚ್ಚಲ ನಟನೆಯ ಸಿನಿಮಾ. ಮೊದಲ ಸಿನಿಮಾದಲ್ಲೇ ದೊಡ್ಡ ಯಶಸ್ಸು ಗಳಿಸಿ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದ್ದರು. ಪ್ರೀತಮ್ ಮತ್ತು ನಂದಿನಿಯ ನವಿರಾದ ಪ್ರೇಮಕಥೆಗೆ ಚಿತ್ರಪ್ರೇಮಿಗಳು ಮನಸೂರೆಗೊಂಡಿದ್ದರು.

ಗಾಳಿಪಟ ಮೂಲಕ ಮತ್ತೆ ಒಂದಾದ ಗಣೇಶ್-ಭಟ್ರು
ಈ ಸಿನಿಮಾ ಬಳಿಕ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾದರು. ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಮುಂಗಾರು ಮಳೆ ಬಳಿಕ ಗಣೇಶ್ ಮತ್ತು ಯೋಗರಾಜ್ ಭಟ್ ಜೋಡಿ ಗಾಳಿಪಟ ಸಿನಿಮಾ ಮೂಲಕ ಮತ್ತೆ ಒಂದಾದರು. ಆದರೆ ಈ ಸಿನಿಮಾ ಮುಂಗಾರು ಮಳೆಯಷ್ಟು ಯಶಸ್ಸು ಕಾಣಲಿಲ್ಲ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm