ಬ್ರೇಕಿಂಗ್ ನ್ಯೂಸ್
29-12-20 12:18 pm Source: FILMIBEAT Shruthi Gk ಸಿನಿಮಾ
ಮುಂಗಾರು ಮಳೆ.. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಬಂದ ಮುಂಗಾರು ಮಳೆ ಸಿನಿಮಾಗೆ ಕನ್ನಡ ಸಿನಿಪ್ರಿಯರು ಮನ ಸೋತಿದ್ದರು. ಚಿತ್ರದ ಕಥೆ, ಡೈಲಾಗ್, ಗಣೇಶ್ ಅಭಿನಯ, ಲೊಕೇಶನ್, ಮಳೆ, ಅದ್ಭುತವಾದ ಸಂಗೀತಕ್ಕೆ ಪ್ರೇಕ್ಷಕರು ತಲೆಬಾಗಿದ್ದರು. 2006ರಲ್ಲಿ ರಿಲೀಸ್ ಆದ ಮುಂಗಾರು ಮಳೆ ಸಿನಿಮಾಗೆ ಈಗ 14 ವರ್ಷದ ಸಂಭ್ರಮ. ಹೌದು, ಇವತ್ತಿಗೆ ಸರಿಯಾಗಿ 14 ವರ್ಷಗಳ ಹಿಂದೆ ಮುಂಗಾರು ಮಳೆ ಸಿನಿಮಾ ರಿಲೀಸ್ ರಾಜ್ಯದಾದ್ಯಂತ ಬಿಡುಗೆಯಾಗಿತ್ತು.
ಗಣೇಶ್ ಗೆ ಸ್ಟಾರ್ ಗಿರಿ ತಂದುಕೊಟ್ಟ ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಯಶಸ್ಸು ಕಂಡ ಮುಂಗಾರು ಮಳೆ ಚಿತ್ರ, ಗಣೇಶ್ ಸಿನಿ ಬದುಕನ್ನೇ ಬದಲಾಯಿಸಿದ ಸಿನಿಮಾವಾಗಿದೆ. ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಈ ಸಿನಿಮಾ ಮೂಲಕ ರಾತ್ರೋ ರಾತ್ರಿ ಸ್ಟಾರ್ ಆಗಿ ಹೊರಹೊಮ್ಮಿದರು. ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಸ್ಟಾರ್ ಗಿರಿ ತಂದುಕೊಟ್ಟ ಚಿತ್ರವಿದು.

ಪೂಜಾ ಗಾಂಧಿ ನಟನೆಯ ಚೊಚ್ಚಲ ಸಿನಿಮಾ
ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಪೂಜಾ ಗಾಂಧಿ ಕಾಣಿಸಿಕೊಂಡಿದ್ದಾರೆ. ಪೂಜಾ ಗಾಂಧಿಗೆ ಇಂದು ಚೊಚ್ಚಲ ನಟನೆಯ ಸಿನಿಮಾ. ಮೊದಲ ಸಿನಿಮಾದಲ್ಲೇ ದೊಡ್ಡ ಯಶಸ್ಸು ಗಳಿಸಿ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದ್ದರು. ಪ್ರೀತಮ್ ಮತ್ತು ನಂದಿನಿಯ ನವಿರಾದ ಪ್ರೇಮಕಥೆಗೆ ಚಿತ್ರಪ್ರೇಮಿಗಳು ಮನಸೂರೆಗೊಂಡಿದ್ದರು.

ಗಾಳಿಪಟ ಮೂಲಕ ಮತ್ತೆ ಒಂದಾದ ಗಣೇಶ್-ಭಟ್ರು
ಈ ಸಿನಿಮಾ ಬಳಿಕ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾದರು. ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಮುಂಗಾರು ಮಳೆ ಬಳಿಕ ಗಣೇಶ್ ಮತ್ತು ಯೋಗರಾಜ್ ಭಟ್ ಜೋಡಿ ಗಾಳಿಪಟ ಸಿನಿಮಾ ಮೂಲಕ ಮತ್ತೆ ಒಂದಾದರು. ಆದರೆ ಈ ಸಿನಿಮಾ ಮುಂಗಾರು ಮಳೆಯಷ್ಟು ಯಶಸ್ಸು ಕಾಣಲಿಲ್ಲ.
This News Article is a Copy of FILMIBEAT
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm