ಬ್ರೇಕಿಂಗ್ ನ್ಯೂಸ್
30-12-20 01:15 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಜೋಡಿ ಹಕ್ಕಿಗಳು ಅಂತನೆ ಕರೆಸಿಕೊಳ್ಳುತ್ತಿದ್ದ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ಇಬ್ಬರು ತಮ್ಮ ಪ್ರೀತಿಯನ್ನು ಬಹಿರಂಗ ಪಡಿಸದಿದ್ದರೂ, ಗುಟ್ಟಾಗಿ ಉಳಿದಿರಲಿಲ್ಲ. ಇಬ್ಬರ ಪ್ರೀತಿಯ ವಿಚಾರ ಆಗಾಗ ಸುದ್ದಿಯಾಗುತಲೇ ಇರುತ್ತೆ. ಆದರೂ ಈ ಜೋಡಿ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ಇದೀಗ ಸದ್ದಿಲ್ಲದೆ ಅಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇಂದು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಇಬ್ಬರ ನಿಶ್ಚಿತಾರ್ಥ ಸಮಾರಂಭ ಜೈಪುರ್ ದಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದೆ. ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಇದೀಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಹಸೆಮಣೆ ಏರಲು ಸಜ್ಜಾಗಿದ್ದಾರೆ.
ಅಂದಹಾಗೆ ಈಗಾಗಲೇ ರಣಬೀರ್ ಮತ್ತು ಅಲಿಯಾ ಕುಟುಂಬ ಜೈಪುರ್ ಗೆ ತೆರಳಿದ್ದಾರೆ. ಜೈಪುರದಲ್ಲಿರುವ ಇಡೀ ಕುಟುಂಬ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಜೈಪುರದಲ್ಲಿ ನಡೆಯುತ್ತಿದೆ ನಿಶ್ಚಿತಾರ್ಥ ಸಮಾರಂಭ
ಬಾಲಿವುಡ್ ಮೂಲಗಳ ಪ್ರಕಾರ ಎಲ್ಲರೂ ಜೈಪುರದ ರಣಥಂಬೋರ್ ಅಮನ್ ಹೋಟೆಲ್ ನಲ್ಲಿ ತಂಗಿದ್ದು, ಅಲ್ಲೇ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ ಎನ್ನಲಾಗುತ್ತಿದೆ. ಎಲ್ಲರೂ ಜೈಪುರಗೆ ತೆರಳಿದ್ದು, ನೋಡಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೀಗ ಅಲಿಯಾ ಮತ್ತು ರಣಬೀರ್ ನಿಶ್ಚಿತಾರ್ಥಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಅಲಿಯಾಗೆ ಉಂಗುರ ತೊಡಿಸಲಿದ್ದಾರೆ ರಣಬೀರ್
ಗಪ್ಯವಾಗಿ ನಡೆಯುವ ಎಂಗೇಜ್ ಮೆಂಟ್ ಸಮಾರಂಭದಲ್ಲಿ ರಣಬೀರ್ ಬಹುಕಾಲದ ಗೆಳತಿ ಅಲಿಯಾಗೆ ರಿಂಗ್ ತೊಡಿಸುವ ಮೂಲಕ ಎಂಗೇಜ್ ಆಗಲಿದ್ದಾರೆ ಎನ್ನಲಾಗುತ್ತಿದೆ. ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ಅಲಿಯಾ ಮತ್ತು ರಣಬೀರ್ ನಿಶ್ಚಿತಾರ್ಥ ನೆರವೇರಲಿದೆ ಎನ್ನುವ ಮಾತುಗಳು ಹರಿದಾಡುತ್ತಿದೆ.

ದೀಪಿಕಾ ಮತ್ತು ರಣ್ವೀರ್ ಸಿಂಗ್ ಭಾಗಿ
ಅಲಿಯಾ ಮತ್ತು ರಣಬೀರ್ ಕುಟುಂಬದ ಜೈಪುರ ಏರ್ ಪೋರ್ಟ್ ನಲ್ಲಿ ಕ್ಯಾಮರಾಗೆ ಸೆರೆಯಾಗಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನು ವಿಶೇಷ ಎಂದರೆ ನಟಿ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಕೂಡ ಜೈಪುರ್ ಗೆ ತೆರಳಿದ್ದು, ರಣಬೀರ್ ಮತ್ತು ಅಲಿಯಾ ನಿಶ್ಚಿತಾರ್ಥದ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಪ್ರೀತಿ ವಿಚಾರ ಬಹಿರಂಗ ಪಡಿಸಿದ್ದ ರಣಬೀರ್ ಕಪೂರ್
ಈ ಬಗ್ಗೆ ಕುಟುಂಬದವರು ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಅಲಿಯಾ ಮತ್ತು ರಣಬೀರ್ ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದಾರೆ. ಆದರೆ ಇಬ್ಬರು ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿಲ್ಲ. ಇತ್ತೀಚಿಗಷ್ಟೆ ರಣಬೀರ್ ಕಪೂರ್ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸಿದ್ದರು. ಅಲಿಯಾ ನನ್ನ ಗರ್ಲ್ ಫ್ರೆಂಡ್ ಎಂದು ಹೇಳುವ ಮೂಲಕ ಪ್ರೀತಿಯನ್ನು ಒಪ್ಪಿಕೊಂಡಿದ್ದರು.
This News Article is a Copy of FILMIBEAT
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm