ಬ್ರೇಕಿಂಗ್ ನ್ಯೂಸ್
30-12-20 01:15 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಜೋಡಿ ಹಕ್ಕಿಗಳು ಅಂತನೆ ಕರೆಸಿಕೊಳ್ಳುತ್ತಿದ್ದ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ಇಬ್ಬರು ತಮ್ಮ ಪ್ರೀತಿಯನ್ನು ಬಹಿರಂಗ ಪಡಿಸದಿದ್ದರೂ, ಗುಟ್ಟಾಗಿ ಉಳಿದಿರಲಿಲ್ಲ. ಇಬ್ಬರ ಪ್ರೀತಿಯ ವಿಚಾರ ಆಗಾಗ ಸುದ್ದಿಯಾಗುತಲೇ ಇರುತ್ತೆ. ಆದರೂ ಈ ಜೋಡಿ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ಇದೀಗ ಸದ್ದಿಲ್ಲದೆ ಅಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇಂದು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಇಬ್ಬರ ನಿಶ್ಚಿತಾರ್ಥ ಸಮಾರಂಭ ಜೈಪುರ್ ದಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿದೆ. ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಇದೀಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಹಸೆಮಣೆ ಏರಲು ಸಜ್ಜಾಗಿದ್ದಾರೆ.
ಅಂದಹಾಗೆ ಈಗಾಗಲೇ ರಣಬೀರ್ ಮತ್ತು ಅಲಿಯಾ ಕುಟುಂಬ ಜೈಪುರ್ ಗೆ ತೆರಳಿದ್ದಾರೆ. ಜೈಪುರದಲ್ಲಿರುವ ಇಡೀ ಕುಟುಂಬ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಜೈಪುರದಲ್ಲಿ ನಡೆಯುತ್ತಿದೆ ನಿಶ್ಚಿತಾರ್ಥ ಸಮಾರಂಭ
ಬಾಲಿವುಡ್ ಮೂಲಗಳ ಪ್ರಕಾರ ಎಲ್ಲರೂ ಜೈಪುರದ ರಣಥಂಬೋರ್ ಅಮನ್ ಹೋಟೆಲ್ ನಲ್ಲಿ ತಂಗಿದ್ದು, ಅಲ್ಲೇ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ ಎನ್ನಲಾಗುತ್ತಿದೆ. ಎಲ್ಲರೂ ಜೈಪುರಗೆ ತೆರಳಿದ್ದು, ನೋಡಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೀಗ ಅಲಿಯಾ ಮತ್ತು ರಣಬೀರ್ ನಿಶ್ಚಿತಾರ್ಥಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ.

ಅಲಿಯಾಗೆ ಉಂಗುರ ತೊಡಿಸಲಿದ್ದಾರೆ ರಣಬೀರ್
ಗಪ್ಯವಾಗಿ ನಡೆಯುವ ಎಂಗೇಜ್ ಮೆಂಟ್ ಸಮಾರಂಭದಲ್ಲಿ ರಣಬೀರ್ ಬಹುಕಾಲದ ಗೆಳತಿ ಅಲಿಯಾಗೆ ರಿಂಗ್ ತೊಡಿಸುವ ಮೂಲಕ ಎಂಗೇಜ್ ಆಗಲಿದ್ದಾರೆ ಎನ್ನಲಾಗುತ್ತಿದೆ. ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ಅಲಿಯಾ ಮತ್ತು ರಣಬೀರ್ ನಿಶ್ಚಿತಾರ್ಥ ನೆರವೇರಲಿದೆ ಎನ್ನುವ ಮಾತುಗಳು ಹರಿದಾಡುತ್ತಿದೆ.

ದೀಪಿಕಾ ಮತ್ತು ರಣ್ವೀರ್ ಸಿಂಗ್ ಭಾಗಿ
ಅಲಿಯಾ ಮತ್ತು ರಣಬೀರ್ ಕುಟುಂಬದ ಜೈಪುರ ಏರ್ ಪೋರ್ಟ್ ನಲ್ಲಿ ಕ್ಯಾಮರಾಗೆ ಸೆರೆಯಾಗಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನು ವಿಶೇಷ ಎಂದರೆ ನಟಿ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಕೂಡ ಜೈಪುರ್ ಗೆ ತೆರಳಿದ್ದು, ರಣಬೀರ್ ಮತ್ತು ಅಲಿಯಾ ನಿಶ್ಚಿತಾರ್ಥದ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಪ್ರೀತಿ ವಿಚಾರ ಬಹಿರಂಗ ಪಡಿಸಿದ್ದ ರಣಬೀರ್ ಕಪೂರ್
ಈ ಬಗ್ಗೆ ಕುಟುಂಬದವರು ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಅಲಿಯಾ ಮತ್ತು ರಣಬೀರ್ ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದಾರೆ. ಆದರೆ ಇಬ್ಬರು ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿಲ್ಲ. ಇತ್ತೀಚಿಗಷ್ಟೆ ರಣಬೀರ್ ಕಪೂರ್ ಪ್ರೀತಿಯ ವಿಚಾರವನ್ನು ಬಹಿರಂಗ ಪಡಿಸಿದ್ದರು. ಅಲಿಯಾ ನನ್ನ ಗರ್ಲ್ ಫ್ರೆಂಡ್ ಎಂದು ಹೇಳುವ ಮೂಲಕ ಪ್ರೀತಿಯನ್ನು ಒಪ್ಪಿಕೊಂಡಿದ್ದರು.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm