ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am