ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm