ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm