ಬ್ರೇಕಿಂಗ್ ನ್ಯೂಸ್
31-12-20 01:23 pm Source: FILMIBEAT Shruthi Gk ಸಿನಿಮಾ
ಬೆಂಗಳೂರು,ಡಿ.31: 2020ರ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ಸಿಹಿಗಿಂತ ಹೆಚ್ಚಾಗಿ ಕಹಿ ಅನುಭವಿಸಿದ್ದೆ ಜಾಸ್ತಿ. ಕೊರೊನಾ ವೈರಸ್ ಈ ವರ್ಷದ ಎಲ್ಲಾ ಸಂತೋಷ, ನೆಮ್ಮದಿಯನ್ನೆ ನುಂಗಿ ಹಾಕಿದೆ. ಅಂತೂ ಈ ವರ್ಷ ಕಳೆಯಿತು ಬರುವ ವರ್ಷವಾದರೂ ಅದ್ಭುತವಾಗಿರಲಿ, ಮೊದಲು ಕೊರೊನಾ ತೊಲಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. 2021ನ್ನು ಅದ್ದೂರಿಯಾಗಿ ಸ್ವಾಗತ ಮಾಡಲು ಇಡೀ ವಿಶ್ವ ಎದುರು ನೋಡುತ್ತಿದೆ. ಅನೇಕರು ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡುತ್ತಾರೆ. ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ 2021ಅನ್ನು ವಿಭಿನ್ನವಾಗಿ ಆಚರಣೆ ಮಾಡಲು ಪ್ಲಾನ್ ಮಾಡಿದ್ದಾರೆ.
ಹೌದು, ವಸಿಷ್ಠ ನಾಳೆ ಅಂದರೆ 2021 ಮೊದಲ ದಿನ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವನ್ನು ಹೊಸ ರೀತಿ ಆಚರಿಸಲು ನಿರ್ಧರಿಸಿದ್ದಾರೆ. ಬೆನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ವಸಿಷ್ಠ ಪ್ರಾಣಿಯನ್ನು ದತ್ತು ಪಡೆಯುತ್ತಿದ್ದಾರೆ. ಆದರೆ ಯಾವ ಪ್ರಾಣಿ ಎನ್ನುವುದು ಬಹಿರಂಗ ಪಡಿಸಿಲ್ಲ. ಆದರೆ ಪ್ರಾಣಿ ದತ್ತು ಪಡೆಯುವ ಮೂಲಕ 2021ನ್ನು ವಿಭಿನ್ನವಾಗಿ ಸದಾ ಕಾಲ ನೆನಪಿನಲ್ಲಿರುವ ಹಾಗೆ ಆಚರಣೆ ಮಾಡುತ್ತಿದ್ದಾರೆ.
ಅಂದಹಾಗೆ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಚಾಲೆಂಜ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಅದೇ ಸಾಲಿಗೆ ವಸಿಷ್ಠ್ ಸಹ ಸೇರುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಇರುವ ಪ್ರಾಣಿ ಪ್ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಗಾಗ ಮೈಸೂರು ಮೃಗಾಲಯದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು ಇತ್ತೀಚಿಗೆ ನಟ ಶಿವರಾಜ್ ಕುಮಾರ್ ಮೈಸೂರು ಮೃಗಾಲಯ ನಲ್ಲಿ ಪಾರ್ವತಿ ಎನ್ನುವ ಆನೆಯನ್ನು ದತ್ತು ಪಡೆದಿದ್ದಾರೆ. ಇದೀಗ ವಸಿಷ್ಠ ಯಾವ ಪ್ರಾಣಿಯನ್ನು ದತ್ತು ಪಡೆಯುತ್ತಾರೆ ಎನ್ನುವುದನ್ನು ಕಾದುನೋಡಬೇಕು.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm