ಬ್ರೇಕಿಂಗ್ ನ್ಯೂಸ್
01-01-21 11:20 am Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am