ಬ್ರೇಕಿಂಗ್ ನ್ಯೂಸ್
01-01-21 11:20 am Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm