ಬ್ರೇಕಿಂಗ್ ನ್ಯೂಸ್
01-01-21 11:20 am Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm