ಬ್ರೇಕಿಂಗ್ ನ್ಯೂಸ್
02-01-21 10:36 am Source: FILMIBEAT ಸಿನಿಮಾ
2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಯ ಪಟ್ಟಿ ಪ್ರಕಟವಾಗಿದೆ. ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಈ ಬಾರಿಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಈ ಪ್ರಶಸ್ತಿ ದೊರೆತಿದೆ.
ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಚಲನಚಿತ್ರೋದ್ಯಮಗಳ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ನಡೆಯುವ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಹೊಸ ವರ್ಷದ ದಿನ ಅನೌನ್ಸ್ ಆಗಿದೆ.
ದಕ್ಷಿಣ ಭಾರತದ ಖ್ಯಾತ ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಜಿತ್ ಕುಮಾರ್, ಮೋಹನ್ ಲಾಲ್ ಮತ್ತು ನಾಗಾರ್ಜುನ ಅಕ್ಕಿನೇನಿ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ ದೊರೆತಿದೆ.

ಅಭಿನಯಕ್ಕೆ ಈ ಪ್ರಶಸ್ತಿ ದೊರೆತಿದೆ. ಇನ್ನು ನಟಿ ತಾನ್ಯಾ ಹೋಪ್ ಅವರಿಗೆ ಯಜಮಾನ ಚಿತ್ರದ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಸಿನಿಮಾ ಮೂಕಜ್ಜಿಯ ಕನಸುಗಳು ಸಿನಿಮಾ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪ್ರೀಮಿಯರ್ ಪದ್ಮಿನಿ ಚಿತ್ರದ ನಿರ್ದೇಶಕ ರಮೇಶ್ ಇಂದಿರಾ ಪಡೆದಿಕೊಂಡಿದ್ದಾರೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ವಿ ಹರಿಕೃಷ್ಣ ಪಾಲಾಗಿದೆ.
ಇನ್ನು ತಮಿಳು ಚಿತ್ರರಂಗದ ಅತ್ಯುತ್ತಮ ಬಹುಮುಖ ನಟ ಪ್ರಶಸ್ತಿಗೆ ಅಜಿತ್ ಕುಮಾರ್ ಭಾಜನರಾಗಿದ್ದಾರೆ. ಅತ್ಯುತ್ತಮ ನಟ ಧನುಷ್ ಪಾಲಾದರೆ ಅತ್ಯುತ್ತಮ ನಟಿ ಪ್ರಶಸ್ತಿ ಜ್ಯೋತಿಕಾಗೆ ದೊರೆತಿದೆ. ಅತ್ಯುತ್ತಮ ತೆಲುಗು ನಟ ಪ್ರಶಸ್ತಿ ನವೀನ್ ಪಾಲಿಶೆಟ್ಟಿಗೆ ದೊರೆತಿದೆ. ಅತ್ಯುತ್ತಮ ನಟಿ ಪ್ರಶಸ್ತಿ ರಶ್ಮಿಕಾ ಮಂದಣ್ಣ ಪಾಲಾಗಿದೆ. ಅತ್ಯುತ್ತಮ ಸಿನಿಮಾ ಜೆರ್ಸಿಗೆ ದೊರೆತಿದೆ. ಇನ್ನು ಅತ್ಯುತ್ತಮ ಮಲಯಾಳಂ ನಟ ಸೂರಜ್ ವೆಂಜರಮೂಡು ಅವರಿಗೆ ದೊರೆತಿದೆ.
ಅತ್ಯುತ್ತಮ ನಟಿ ಪಾರ್ವತಿ ತಿರುವೊತ್ತು ಪಾಲಾಗಿದೆ. ಸದ್ಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟ ವಾಗಿದೆ. ಯಾವಾಗ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎನ್ನುವ ಬಗ್ಗೆ ಮಾಹಿತಿ ಇನ್ನು ಬಹಿರಂಗವಾಗಿಲ್ಲ. ಕಳೆದ ಬಾರಿ ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಾಕಿಂಗ್ ಸ್ಟಾರ್ ಯಶ್ ಪಡೆದುಕೊಂಡಿದ್ದರು.
This News Article is a Copy of FILMIBEAT
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm