ಬ್ರೇಕಿಂಗ್ ನ್ಯೂಸ್
02-01-21 10:54 am Source: FILMIBEAT ಸಿನಿಮಾ
ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳ ಸಂಖ್ಯೆ ಕೋಟಿಗಳಲ್ಲಿದೆ. ಅಭಿಮಾನಿಗಳ ಪಾಲಿಗೆ ಆರಾಧ್ಯ ದೈವ ಮೆಗಾಸ್ಟಾರ್ ಚಿರಂಜೀವಿ. ಆದರೆ ತೆಲುಗಿನದ್ದೇ ಆದ ಒಟಿಟಿಯೊಂದು ಇದೀಗ ಚಿರಂಜೀವಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ಆ ನಂತರ ತನ್ನ ತಪ್ಪು ತಿದ್ದಿಕೊಂಡು ಕ್ಷಮಾಪಣೆ ಸಹ ಕೇಳಿದೆ. ತೆಲುಗಿನ 'ಆಹಾ' ಒಟಿಟಿ ಇತ್ತೀಚೆಗೆ ಸಖತ್ ಖ್ಯಾತಿ ಗಳಿಸಿದೆ. ಆಹಾ ದಲ್ಲಿ ಸಮಂತಾ ನಡೆಸಿಕೊಡುವ 'ಸ್ಯಾಮ್ ಜ್ಯಾಮ್' ಹೆಸರಿನ ಟಾಕ್ ಶೋ ಅಂತೂ ಸಖತ್ ಹಿಟ್ ಆಗಿದೆ. ಈ ಟಾಕ್ ಶೋ ಗೆ ಮೆಗಾಸ್ಟಾರ್ ಚಿರಂಜೀವಿ, ವಿಜಯ್ ದೇವರಕೊಂಡ, ತಮನ್ನಾ ಇನ್ನೂ ಹಲವು ಸ್ಟಾರ್ಗಳು ಬಂದಿದ್ದಾರೆ. ಇತ್ತೀಚೆಗೆ ಅಲ್ಲು ಅರ್ಜುನ್ ಸಹ ಬಂದಿದ್ದರು. ಆಗಲೇ ಆಗಿದ್ದ ಯಡವಟ್ಟು.

ಟಾಕ್ ಶೋ ಗೆ ಬಂದಿದ್ದ ಅಲ್ಲು ಅರ್ಜುನ್ ಸ್ಯಾಮ್ ಜ್ಯಾಮ್ ಟಾಕ್ ಶೋ ಗೆ ಅಲ್ಲು ಅರ್ಜುನ್ ಬಂದಿದ್ದು, ಈ ಎಪಿಸೋಡ್ನ ಪ್ರಚಾರಕ್ಕಾಗಿ ಹಲವು ಪ್ರೋಮೋಗಳನ್ನು ಒಟಿಟಿಯು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿತ್ತು. ಆದರೆ ಒಂದು ಪ್ರೋಮೋ ದಲ್ಲಿ ಅಲ್ಲು ಅರ್ಜುನ್ ಅನ್ನು 'ಮೆಗಾಸ್ಟಾರ್' ಎಂದು ಸಂಭೋದಿಸಲಾಗಿತ್ತು. ಇದು ಚಿರು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಯಿತು.
ಅಲ್ಲು ಅರ್ಜುನ್ ಅನ್ನು 'ಮೆಗಾಸ್ಟಾರ್' ಎಂದ ಆಹಾ
ಆಹಾ ಒಟಿಟಿಯನ್ನು, ಅಲ್ಲು ಅರ್ಜುನ್ ಅನ್ನು ಸಮಂತಾ ಅನ್ನುನ ಗುರಿಯಾಗಿಸಿ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಎತ್ತಿದರು. ಅಲ್ಲು ಅರ್ಜುನ್ ಅನ್ನು ಸಖತ್ ಟ್ರೋಲ್ ಮಾಡಲಾಯಿತು.

ಕ್ಷಮೆ ಕೋರಿದ ಆಹಾ ಒಟಿಟಿ
ಕೊನೆಗೆ ತನ್ನ ತಪ್ಪು ತಿದ್ದಿಕೊಂಡ ಆಹಾ, ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿ, 'ನಿಮ್ಮ ಪ್ರೀತಿಯಿಂದಲೇ ನಾವು ಇಷ್ಟು ದೂರ ಬಂದಿದ್ದೇವೆ. ಉದ್ದೇಶಪೂರ್ವಕವಲ್ಲದ ತಪ್ಪು ನಮ್ಮಿಂದ ಆಗಿದೆ. ನಮ್ಮ ತಪ್ಪಿನಿಂದ ಯಾರಿಗೆ ಬೇಸರವಾಗಿದೆಯೋ ಅವರಿಗೆಲ್ಲ ಕ್ಷಮೆ ಕೋರುತ್ತಿದ್ದೇವೆ' ಎಂದಿದೆ ಆಹಾ.

ಇರುವುದು ಒಬ್ಬರೇ ಮೆಗಾಸ್ಟಾರ್
ಅಷ್ಟೇ ಅಲ್ಲದೆ, 'ಇಡೀಯ ಸಿನಿಮಾ ಉದ್ಯಮದಲ್ಲಿ ಒಬ್ಬರೇ ಮೆಗಾಸ್ಟಾರ್ ಇರುವುದು ಅವರು ಯಾರೆಂದು ನಾವು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ' ಎಂದಿದೆ ಒಟಿಟಿ. ಆಹಾ ಕೋರಿದ ಕ್ಷಮೆಯನ್ನು ಮನ್ನಿಸಿದ್ದಾರೆ ಚಿರಂಜೀವಿ ಅಭಿಮಾನಿಗಳು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm