ಬ್ರೇಕಿಂಗ್ ನ್ಯೂಸ್
20-03-26 09:49 pm HK News Staffer ಸಿನಿಮಾ
ಬೆಂಗಳೂರು, ಮಾರ್ಚ್ 20: ಕಾಂತಾರ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿರುವ ನಟ ರಿಷಬ್ ಶೆಟ್ಟಿ ಯುಗಾದಿ ದಿನವೇ ಹೊಸ ಸುದ್ದಿ ಕೊಟ್ಟಿದ್ದಾರೆ. ‘ಚಾಪ್ಟರ್ 2’ ಎಂದು ಪೋಸ್ಟ್ ಮಾಡಿ ಅಚ್ಚರಿ ಸೃಷ್ಟಿಸಿದ್ದಾರೆ. ಇದೇ ವೇಳೆ, ರಿಷಬ್ ಶೆಟ್ಟಿ ತಮ್ಮ ಇನ್ಸ್ಟಾ ಖಾತೆಯಿಂದ ಹೊಂಬಾಳೆ ಫಿಲ್ಮ್ಸ್ ಹೆಸರನ್ನು ಅನ್ಫಾಲೋ ಮಾಡಿ ಮತ್ತಷ್ಟು ಅಚ್ಚರಿ ಮೂಡಿಸಿದ್ದಾರೆ.
ಕಾಂತಾರ ಮೊದಲ ಚಿತ್ರ ಬಂದ ಬಳಿಕ 'ಕಾಂತಾರ: ಚಾಪ್ಟರ್ 1’ ಸಿನಿಮಾ ಮಾಡಿದ್ದು ಭಾರೀ ಹೆಸರು ಮತ್ತು ಗಳಿಕೆಯನ್ನೂ ಮಾಡಿತ್ತು. ಇದೀಗ ರಿಷಬ್ ಅವರು ಯುಗಾದಿ ದಿನವೇ ‘ಚಾಪ್ಟರ್ 2’ ಎಂದು ರಿಷಬ್ ಘೋಷಣೆ ಮಾಡಿದ್ದಲ್ಲದೆ ತನ್ನದೇ ಬ್ಯಾನರಿನಡಿ ಸಿನಿಮಾ ಮಾಡುತ್ತಾರೆಯೇ ಎಂಬ ಶಂಕೆಗೀಡು ಮಾಡಿದ್ದಾರೆ.
ಇಲ್ಲಿ ರಿಷಬ್ ‘ಚಾಪ್ಟರ್ 2’ ಘೋಷಣೆ ಮಾಡಿದ್ದಕ್ಕಿಂತಲೂ ಹೊಂಬಾಳೆ ಫಿಲಂಸನ್ನು ಅನ್ ಫಾಲೋ ಮಾಡಿದ್ದು ಹೆಚ್ಚು ಚರ್ಚೆ ಹುಟ್ಟುಹಾಕಿದೆ. ಯಾಕಂದ್ರೆ, ‘ಕಾಂತಾರ’ ಚಿತ್ರ ರಿಷಬ್ ಶೆಟ್ಟಿಯದ್ದಾಗಿದ್ದರೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದು ನಿರ್ಮಾಣ ಹೊಣೆ ಹೊತ್ತ ಹೊಂಬಾಳೆ ಫಿಲ್ಮ್ಸ್ ತಂಡ. ಆದರೆ, ಇದೀಗ ‘ಚಾಪ್ಟರ್ 2’ ಅಂತ ಸುಳಿವು ಕೊಟ್ಟು ಹೊಂಬಾಳೆ ತಂಡವನ್ನು ಅನ್ ಫಾಲೋ ಮಾಡಿದ್ದು ಹೊಸ ಚಿತ್ರಕ್ಕೆ ನಿರ್ಮಾಣದ ಹೊಣೆಯನ್ನು ಬೇರೆಯವರಿಗೆ ಕೊಡುತ್ತಾರಾ, ತಾವೇ ಮಾಡುತ್ತಾರೆಯೇ ಎಂಬ ಸಂಶಯ ಹುಟ್ಟಿಸಿದೆ.
ಆದರೆ ಪೋಸ್ಟ್ ನಲ್ಲಿ ಎಲ್ಲಿಯೂ ‘ಕಾಂತಾರ: ಚಾಪ್ಟರ್ 2’ ಎಂದು ಹೇಳಿಲ್ಲ. ಆದರೆ ಕಾಂತಾರ ಚಿತ್ರದ್ದೇ ಚಾಪ್ಟರ್ 2 ಎನ್ನುವ ಮಾತನ್ನು ಅಭಿಮಾನಿಗಳು ಹೇಳುತ್ತಿದ್ದಾರೆ. ಇದೇ ವೇಳೆ, ರಿಷಬ್ ಅವರು ಇನ್ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಗಳನ್ನು ಅನ್ಫಾಲೋ ಮಾಡಿದ್ದಾರೆ. ಹೀಗಾಗಿ ರಿಷಬ್ ಯಾವ ಅರ್ಥದಲ್ಲಿ ಈ ಟಾಂಗ್ ಕೊಟ್ಟಿದ್ದಾರೆಂದು ಗೊಂದಲವೂ ಸೃಷ್ಟಿಯಾಗಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm