ಬ್ರೇಕಿಂಗ್ ನ್ಯೂಸ್
07-04-26 10:48 pm HK News Staffer ಸಿನಿಮಾ
ಚೆನ್ನೈ, ಏ 07: ನಟಿ ತ್ರಿಷಾ ಕೃಷ್ಣನ್ ಅವರ ಬಗ್ಗೆ ಕಳೆದ ಕೆಲವು ವಾರಗಳಿಂದ ಹರಿದಾಡುತ್ತಿರುವ ವದಂತಿಗಳಿಗೆ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಿನಿಮಾ ಬಿಟ್ಟಿದ್ದಾರೆ, ಮದುವೆಯಾಗಿದ್ದಾರೆ, ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬ ಸುದ್ದಿಗಳ ನಡುವೆ ತ್ರಿಷಾ ತಮ್ಮದೇ ಶೈಲಿಯಲ್ಲಿ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ.
ಇತ್ತೀಚೆಗೆ ವಿಜಯ್ ಅವರೊಂದಿಗೆ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡ ಬಳಿಕ ತ್ರಿಷಾ ಹೆಸರು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ವಿಜಯ್ ಅವರ ವೈಯಕ್ತಿಕ ಜೀವನದ ವಿಚಾರಗಳ ಜೊತೆಗೆ ತ್ರಿಷಾ ಹೆಸರು ಸೇರಿಕೊಂಡ ಹಲವು ಊಹಾಪೋಹಗಳು ಹರಿದಾಡಿದವು.
ಈ ಎಲ್ಲಾ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ತ್ರಿಷಾ, ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ವ್ಯಂಗ್ಯಭರಿತವಾಗಿ ಬರೆಯುತ್ತಾ, “ನಾನು ಸಿನಿಮಾ ರಂಗವನ್ನೇ ಬಿಟ್ಟಿದ್ದೇನೆ, ಶ್ರೀಮಂತ ಉದ್ಯಮಿಯೊಬ್ಬರನ್ನು ಮದುವೆಯಾಗಿದ್ದೇನೆ, ನಾಲ್ಕು ಮಕ್ಕಳಿಗೆ ತಾಯಿಯಾಗಿದ್ದೇನೆ... ಇನ್ನೇನಾದರೂ ಸೇರಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಹರಿದಾಡುತ್ತಿರುವ ಎಲ್ಲ ವದಂತಿಗಳು ಕಲ್ಪಿತವೆಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಸದ್ಯ ತ್ರಿಷಾ ತಮ್ಮ ಸಿನಿ ಜೀವನದಲ್ಲಿ ಬ್ಯುಸಿಯಾಗಿದ್ದು, ಆಪ್ತರೊಂದಿಗೆ ಸಮಯ ಕಳೆಯುತ್ತಾ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ನಿರಂತರವಾಗಿ ಹರಡುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸತ್ತು ಈ ಬಾರಿ ನೇರವಾಗಿ ಪ್ರತಿಕ್ರಿಯಿಸಲು ಮುಂದಾಗಿದ್ದಾರೆ.
ತ್ರಿಷಾ ಈ ಒಂದು ಪೋಸ್ಟ್ ಮೂಲಕ ಎಲ್ಲಾ ಗಾಸಿಪ್ಗಳಿಗೆ ತಕ್ಕ ಉತ್ತರ ನೀಡಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ವದಂತಿಗಳನ್ನು ಹರಡುವವರ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm