ಬ್ರೇಕಿಂಗ್ ನ್ಯೂಸ್
07-04-26 10:48 pm HK News Staffer ಸಿನಿಮಾ
ಚೆನ್ನೈ, ಏ 07: ನಟಿ ತ್ರಿಷಾ ಕೃಷ್ಣನ್ ಅವರ ಬಗ್ಗೆ ಕಳೆದ ಕೆಲವು ವಾರಗಳಿಂದ ಹರಿದಾಡುತ್ತಿರುವ ವದಂತಿಗಳಿಗೆ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಿನಿಮಾ ಬಿಟ್ಟಿದ್ದಾರೆ, ಮದುವೆಯಾಗಿದ್ದಾರೆ, ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬ ಸುದ್ದಿಗಳ ನಡುವೆ ತ್ರಿಷಾ ತಮ್ಮದೇ ಶೈಲಿಯಲ್ಲಿ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ.
ಇತ್ತೀಚೆಗೆ ವಿಜಯ್ ಅವರೊಂದಿಗೆ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡ ಬಳಿಕ ತ್ರಿಷಾ ಹೆಸರು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ವಿಜಯ್ ಅವರ ವೈಯಕ್ತಿಕ ಜೀವನದ ವಿಚಾರಗಳ ಜೊತೆಗೆ ತ್ರಿಷಾ ಹೆಸರು ಸೇರಿಕೊಂಡ ಹಲವು ಊಹಾಪೋಹಗಳು ಹರಿದಾಡಿದವು.
ಈ ಎಲ್ಲಾ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ತ್ರಿಷಾ, ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ವ್ಯಂಗ್ಯಭರಿತವಾಗಿ ಬರೆಯುತ್ತಾ, “ನಾನು ಸಿನಿಮಾ ರಂಗವನ್ನೇ ಬಿಟ್ಟಿದ್ದೇನೆ, ಶ್ರೀಮಂತ ಉದ್ಯಮಿಯೊಬ್ಬರನ್ನು ಮದುವೆಯಾಗಿದ್ದೇನೆ, ನಾಲ್ಕು ಮಕ್ಕಳಿಗೆ ತಾಯಿಯಾಗಿದ್ದೇನೆ... ಇನ್ನೇನಾದರೂ ಸೇರಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಹರಿದಾಡುತ್ತಿರುವ ಎಲ್ಲ ವದಂತಿಗಳು ಕಲ್ಪಿತವೆಂಬುದನ್ನು ಸ್ಪಷ್ಟಪಡಿಸಿದ್ದಾರೆ.
ಸದ್ಯ ತ್ರಿಷಾ ತಮ್ಮ ಸಿನಿ ಜೀವನದಲ್ಲಿ ಬ್ಯುಸಿಯಾಗಿದ್ದು, ಆಪ್ತರೊಂದಿಗೆ ಸಮಯ ಕಳೆಯುತ್ತಾ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ ನಿರಂತರವಾಗಿ ಹರಡುತ್ತಿರುವ ಸುಳ್ಳು ಸುದ್ದಿಗಳಿಂದ ಬೇಸತ್ತು ಈ ಬಾರಿ ನೇರವಾಗಿ ಪ್ರತಿಕ್ರಿಯಿಸಲು ಮುಂದಾಗಿದ್ದಾರೆ.
ತ್ರಿಷಾ ಈ ಒಂದು ಪೋಸ್ಟ್ ಮೂಲಕ ಎಲ್ಲಾ ಗಾಸಿಪ್ಗಳಿಗೆ ತಕ್ಕ ಉತ್ತರ ನೀಡಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ವದಂತಿಗಳನ್ನು ಹರಡುವವರ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm