ಬ್ರೇಕಿಂಗ್ ನ್ಯೂಸ್
04-01-21 02:52 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಜ.4 :ಸುಮಾರು ಐದು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಹಿರಿಯ ಕಲಾವಿದ ಹಿರಿಯ ನಟ ಶನಿಮಹದೇವಪ್ಪ (90 ವರ್ಷ) ಭಾನುವಾರ ಸಂಜೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದೊಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಕೊರೊನಾ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದರು ಎಂದು ಹೇಳಲಾಗಿದೆ. ವರನಟ ಡಾ ರಾಜ್ ಕುಮಾರ್ ಅವರ ಬಹುತೇಕ ಚಿತ್ರಗಳಲ್ಲಿ ಶನಿ ಮಹಾದೇವಪ್ಪ ಅವರು ಇರುತ್ತಿದ್ದರು. ನಾಟಕ, ಸಿನಿಮಾಗಳ ವೈವಿಧ್ಯಮಯ ಪಾತ್ರಗಳ ಮೂಲಕ ಜನರಿಗೆ ಚಿರಪರಿಚಿತರಾಗಿದ್ದ ಕಲಾವಿದ ಇನ್ನಿಲ್ಲ ಎಂಬ ಸುದ್ದಿ ಕೇಳಿ ಸಿನಿಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಅವರ ಕಲಾಸೇವೆ ಚಿರಸ್ಥಾಯಿ ''ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ (90 ವರ್ಷ) ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಸರಿ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಅವರ ಕಲಾಸೇವೆ ಚಿರಸ್ಥಾಯಿ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ'' - ಸುಮಲತಾ ಅಂಬರೀಶ್

ಪುನೀತ್ ಸಂತಾಪ ''ಅಪ್ಪಾಜಿಯವರ ಜೊತೆ ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಕವಿರತ್ನ ಕಾಳಿದಾಸ, ಮೂರೂವರೆ ವಜ್ರಗಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ ಹಿರಿಯ ನಟರಾದ ಶನಿ ಮಹದೇವಪ್ಪನವರು ನಮ್ಮನ್ನು ಅಗಲಿದ್ದಾರೆ'' - ಪುನೀತ್ ರಾಜ್ ಕುಮಾರ್

ಸುದೀಪ್ ಸಂತಾಪ ಹಿರಿಯ ಕಲಾವಿದ, ಅಣ್ಣಾವ್ರ ಚಿತ್ರಗಳಲ್ಲಿ ಹೆಚ್ಚು ನಟಿಸಿರುವ ಶನಿ ಮಹಾದೇವಪ್ಪ ಅವರ ನಿಧನಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಸಂತಾಪ ಸೂಚಿಸಿದ್ದಾರೆ. ತಮ್ಮ ಟ್ವಿಟ್ಟರ್ನಲ್ಲಿ ಶನಿ ಮಹಾದೇವಪ್ಪ ಅವರ ಫೋಟೋ ಹಂಚಿಕೊಂಡು ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಮಾವ ಎಂದು ಕರೆಯುತ್ತಿದ್ದೆ- ಜಗ್ಗೇಶ್ ''1984 ರಿಂದ ಬಲ್ಲೆ ಈತನ ಮಾವ ಎಂದು ಕರೆಯುತ್ತಿದ್ದೆ. ಅಣ್ಣನ ಆತ್ಮೀಯ! ಸಕ್ಕರೆ ಖಾಯಿಲೆಯಿಂದ ಎರಡು ಕಣ್ಣು ಕಳೆದುಕೊಂಡಿದ್ದ. 10 ವರ್ಷ ಹಿಂದೆ ಮೇಯರ್ ಫಂಡ್ನಿಂದ ಈತನಿಗೆ ವಿಶೇಷ ಪ್ಯಾಕೇಜ್ 5 ಲಕ್ಷ ಬರುವಂತೆ ಶ್ರಮಿಸಿದ್ದೆ ಹಾಗು ವೈಯಕ್ತಿಕವಾಗಿ ನಾನು ಬ್ಯಾಂಕ್ ಜನಾರ್ದನ ಜೂತೆ ಹೋಗಿ ಕೈಲಾದ ಸಹಾಯ ಮಾಡಿದ್ದೆ. 80 ವರ್ಷ ವಯಸ್ಸು ದಾಟಿದೆ. ಇವರ ಆತ್ಮಕ್ಕೆ ಶಾಂತಿ'' - ಜಗ್ಗೇಶ್
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am