ಬ್ರೇಕಿಂಗ್ ನ್ಯೂಸ್
04-01-21 02:52 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಜ.4 :ಸುಮಾರು ಐದು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಹಿರಿಯ ಕಲಾವಿದ ಹಿರಿಯ ನಟ ಶನಿಮಹದೇವಪ್ಪ (90 ವರ್ಷ) ಭಾನುವಾರ ಸಂಜೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದೊಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ಕೊರೊನಾ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದರು ಎಂದು ಹೇಳಲಾಗಿದೆ. ವರನಟ ಡಾ ರಾಜ್ ಕುಮಾರ್ ಅವರ ಬಹುತೇಕ ಚಿತ್ರಗಳಲ್ಲಿ ಶನಿ ಮಹಾದೇವಪ್ಪ ಅವರು ಇರುತ್ತಿದ್ದರು. ನಾಟಕ, ಸಿನಿಮಾಗಳ ವೈವಿಧ್ಯಮಯ ಪಾತ್ರಗಳ ಮೂಲಕ ಜನರಿಗೆ ಚಿರಪರಿಚಿತರಾಗಿದ್ದ ಕಲಾವಿದ ಇನ್ನಿಲ್ಲ ಎಂಬ ಸುದ್ದಿ ಕೇಳಿ ಸಿನಿಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಅವರ ಕಲಾಸೇವೆ ಚಿರಸ್ಥಾಯಿ ''ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ಕಲಾವಿದರಾದ ಶನಿ ಮಹಾದೇವಪ್ಪನವರ (90 ವರ್ಷ) ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಸರಿ ಸುಮಾರು 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿರುವ ಅವರ ಕಲಾಸೇವೆ ಚಿರಸ್ಥಾಯಿ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ'' - ಸುಮಲತಾ ಅಂಬರೀಶ್

ಪುನೀತ್ ಸಂತಾಪ ''ಅಪ್ಪಾಜಿಯವರ ಜೊತೆ ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ, ಕವಿರತ್ನ ಕಾಳಿದಾಸ, ಮೂರೂವರೆ ವಜ್ರಗಳು ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ ಹಿರಿಯ ನಟರಾದ ಶನಿ ಮಹದೇವಪ್ಪನವರು ನಮ್ಮನ್ನು ಅಗಲಿದ್ದಾರೆ'' - ಪುನೀತ್ ರಾಜ್ ಕುಮಾರ್

ಸುದೀಪ್ ಸಂತಾಪ ಹಿರಿಯ ಕಲಾವಿದ, ಅಣ್ಣಾವ್ರ ಚಿತ್ರಗಳಲ್ಲಿ ಹೆಚ್ಚು ನಟಿಸಿರುವ ಶನಿ ಮಹಾದೇವಪ್ಪ ಅವರ ನಿಧನಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ಸಂತಾಪ ಸೂಚಿಸಿದ್ದಾರೆ. ತಮ್ಮ ಟ್ವಿಟ್ಟರ್ನಲ್ಲಿ ಶನಿ ಮಹಾದೇವಪ್ಪ ಅವರ ಫೋಟೋ ಹಂಚಿಕೊಂಡು ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಮಾವ ಎಂದು ಕರೆಯುತ್ತಿದ್ದೆ- ಜಗ್ಗೇಶ್ ''1984 ರಿಂದ ಬಲ್ಲೆ ಈತನ ಮಾವ ಎಂದು ಕರೆಯುತ್ತಿದ್ದೆ. ಅಣ್ಣನ ಆತ್ಮೀಯ! ಸಕ್ಕರೆ ಖಾಯಿಲೆಯಿಂದ ಎರಡು ಕಣ್ಣು ಕಳೆದುಕೊಂಡಿದ್ದ. 10 ವರ್ಷ ಹಿಂದೆ ಮೇಯರ್ ಫಂಡ್ನಿಂದ ಈತನಿಗೆ ವಿಶೇಷ ಪ್ಯಾಕೇಜ್ 5 ಲಕ್ಷ ಬರುವಂತೆ ಶ್ರಮಿಸಿದ್ದೆ ಹಾಗು ವೈಯಕ್ತಿಕವಾಗಿ ನಾನು ಬ್ಯಾಂಕ್ ಜನಾರ್ದನ ಜೂತೆ ಹೋಗಿ ಕೈಲಾದ ಸಹಾಯ ಮಾಡಿದ್ದೆ. 80 ವರ್ಷ ವಯಸ್ಸು ದಾಟಿದೆ. ಇವರ ಆತ್ಮಕ್ಕೆ ಶಾಂತಿ'' - ಜಗ್ಗೇಶ್
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm