ಬ್ರೇಕಿಂಗ್ ನ್ಯೂಸ್
04-01-21 02:59 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಡಾಲಿ ಧನಂಜಯ ಸದ್ಯ ಕಾಶ್ಮೀರದಲ್ಲಿ ಬೀಡುಬಿಟ್ಟಿದ್ದಾರೆ. ಧನಂಜಯ ನಟಿ ರೆಬಾ ಮೋನಿಕಾ ಜೊತೆ ಕಶ್ಮೀರದಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಧನಂಜಯ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ಧನಂಜಯ ಕಾಶ್ಮೀರ ಪ್ರವಾಸದಲ್ಲಿದ್ದಾರಾ ಅಂತ ಯೋಚಿಸುತ್ತೀರಾ?
ರೆಬಾ ಮೋನಿಕಾ, ಡಾಲಿ ಕಾಶ್ಮೀರದ ಫೋಟೊ ವೈರಲ್
ಧನಂಜಯ ಕಾಶ್ಮೀರ ಪ್ರವಾಸಕ್ಕೆ ಹೋಗಿರುವುದು ನಿಜ. ಆದರೆ ಚಿತ್ರೀಕರಣಕ್ಕಾಗಿ. ಹೌದು, ಡಾಲಿ ಸದ್ಯ ರತ್ನನ್ ಪ್ರಪಂಚ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಸದ್ಯ ಹಿಮ ಪ್ರದೇಶದಲ್ಲಿ ನಡೆಯುತ್ತಿದೆ. ಚಿತ್ರದ ನಾಯಕಿ ರೆಬಾ ಮೋನಿಕಾ ಜೊತೆ ಧನಂಜಯ ಕ್ಲಿಕ್ಕಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಂದಹಾಗೆ 'ರತ್ನನ್ ಪ್ರಪಂಚ' ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನು ಮೈಸೂರಿನಲ್ಲಿ ಯಶಸ್ವಿಯಾಗಿ ಮಾಡಿ ಮುಗಿಸಿದ್ದಾರೆ. ರತ್ನನ್ ಪ್ರಪಂಚ ಸಿನಿಮಾ ನಿರ್ದೇಶಕ ರೋಹಿತ್ ಪದಕಿ ಸಾರಥ್ಯದಲ್ಲಿ ಮೂಡಿಬರುತ್ತಿದೆ.
ಮಲಯಾಳಂ ಮತ್ತು ತಮಿಳು ಸಿನಿಮಾರಂಗದಲ್ಲಿ ಮಿಂಚುತ್ತಿದ್ದ ನಟಿ ರೆಬಾ ಮೋನಿಕಾ ಇದೀಗ ಕನ್ನಡ ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಮೊದಲ ಬಾರಿಗೆ ನಟ ಧನಂಜಯಗೆ ಜೋಡಿಯಾಗಿದ್ದು, ಕನ್ನಡ ಪ್ರೇಕ್ಷಕರ ಮುಂದೆ ಬರಲು ಉತ್ಸುಕರಾಗಿದ್ದಾರೆ. ಅಂದಹಾಗೆ ಧನಂಜಯ ಚಿತ್ರದಲ್ಲಿ ಮಧ್ಯಮ ವರ್ಗದ ಸಾಮಾನ್ಯ ವ್ಯಕ್ತಿ ರತ್ನಾಕರ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೆಚ್ಚು ಕೆಲಸ ಮಾಡುವ ಇನ್ಶೂರೆನ್ಸ್ ಏಜೆಂಟ್ ಆಗಿ ತನ್ನ ಕುಟುಂಬ ಸಾಗಿಸುವ ಪಾತ್ರದಲ್ಲಿ ಧನಂಜಯ ಮಿಂಚಿದ್ದಾರೆ. ವಿಶೇಷ ಎಂದರೆ ಸಿನಿಮಾದಲ್ಲಿ ಹಿರಿಯ ನಟಿ ಉಮಾಶ್ರೀ ಧನಂಜಯ ತಾಯಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಗ್ಯಾಪ್ ನ ಬಳಿಕ ಉಮಾಶ್ರೀ ರತ್ನನ್ ಪ್ರಪಂಚ ಸಿನಿಮಾ ಮೂಲಕ ನಟಿ ಉಮಾಶ್ರೀ ವಾಪಸ್ ಆಗಿದ್ದಾರೆ.

ಧನಂಜಯ ನಾಯಕ ಮತ್ತು ವಿಲನ್ ಎರಡು ಪಾತ್ರಗಳನ್ನು ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಸದ್ಯ ಧನಂಜಯ್ ಸಲಗ, ಪೊಗರು, ಯುವರತ್ನ, ಡಾಲಿ, ತೋತಾಪುರಿ, ಬಡವ ರಾಸ್ಕಲ್, ಹೆಡ್ ಬುಷ್, ಶಿವಪ್ಪ ಮತ್ತು ತೆಲುಗಿನ 'ಪುಷ್ಪ' ಸಿನಿಮಾದಲ್ಲಿ ಮಿಂಚುತ್ತಿದ್ದಾರೆ. ಅಲ್ಲದೆ ಇನ್ನೂ ಹೆಸರಿಡದ ಸಾಕಷ್ಟು ಸಿನಿಮಾಗಳು ಧನಂಜಯ್ ಬಳಿ ಇವೆ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm