ಬ್ರೇಕಿಂಗ್ ನ್ಯೂಸ್
04-01-21 02:59 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಡಾಲಿ ಧನಂಜಯ ಸದ್ಯ ಕಾಶ್ಮೀರದಲ್ಲಿ ಬೀಡುಬಿಟ್ಟಿದ್ದಾರೆ. ಧನಂಜಯ ನಟಿ ರೆಬಾ ಮೋನಿಕಾ ಜೊತೆ ಕಶ್ಮೀರದಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಧನಂಜಯ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ಧನಂಜಯ ಕಾಶ್ಮೀರ ಪ್ರವಾಸದಲ್ಲಿದ್ದಾರಾ ಅಂತ ಯೋಚಿಸುತ್ತೀರಾ?
ರೆಬಾ ಮೋನಿಕಾ, ಡಾಲಿ ಕಾಶ್ಮೀರದ ಫೋಟೊ ವೈರಲ್
ಧನಂಜಯ ಕಾಶ್ಮೀರ ಪ್ರವಾಸಕ್ಕೆ ಹೋಗಿರುವುದು ನಿಜ. ಆದರೆ ಚಿತ್ರೀಕರಣಕ್ಕಾಗಿ. ಹೌದು, ಡಾಲಿ ಸದ್ಯ ರತ್ನನ್ ಪ್ರಪಂಚ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಸದ್ಯ ಹಿಮ ಪ್ರದೇಶದಲ್ಲಿ ನಡೆಯುತ್ತಿದೆ. ಚಿತ್ರದ ನಾಯಕಿ ರೆಬಾ ಮೋನಿಕಾ ಜೊತೆ ಧನಂಜಯ ಕ್ಲಿಕ್ಕಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಂದಹಾಗೆ 'ರತ್ನನ್ ಪ್ರಪಂಚ' ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನು ಮೈಸೂರಿನಲ್ಲಿ ಯಶಸ್ವಿಯಾಗಿ ಮಾಡಿ ಮುಗಿಸಿದ್ದಾರೆ. ರತ್ನನ್ ಪ್ರಪಂಚ ಸಿನಿಮಾ ನಿರ್ದೇಶಕ ರೋಹಿತ್ ಪದಕಿ ಸಾರಥ್ಯದಲ್ಲಿ ಮೂಡಿಬರುತ್ತಿದೆ.
ಮಲಯಾಳಂ ಮತ್ತು ತಮಿಳು ಸಿನಿಮಾರಂಗದಲ್ಲಿ ಮಿಂಚುತ್ತಿದ್ದ ನಟಿ ರೆಬಾ ಮೋನಿಕಾ ಇದೀಗ ಕನ್ನಡ ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಮೊದಲ ಬಾರಿಗೆ ನಟ ಧನಂಜಯಗೆ ಜೋಡಿಯಾಗಿದ್ದು, ಕನ್ನಡ ಪ್ರೇಕ್ಷಕರ ಮುಂದೆ ಬರಲು ಉತ್ಸುಕರಾಗಿದ್ದಾರೆ. ಅಂದಹಾಗೆ ಧನಂಜಯ ಚಿತ್ರದಲ್ಲಿ ಮಧ್ಯಮ ವರ್ಗದ ಸಾಮಾನ್ಯ ವ್ಯಕ್ತಿ ರತ್ನಾಕರ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೆಚ್ಚು ಕೆಲಸ ಮಾಡುವ ಇನ್ಶೂರೆನ್ಸ್ ಏಜೆಂಟ್ ಆಗಿ ತನ್ನ ಕುಟುಂಬ ಸಾಗಿಸುವ ಪಾತ್ರದಲ್ಲಿ ಧನಂಜಯ ಮಿಂಚಿದ್ದಾರೆ. ವಿಶೇಷ ಎಂದರೆ ಸಿನಿಮಾದಲ್ಲಿ ಹಿರಿಯ ನಟಿ ಉಮಾಶ್ರೀ ಧನಂಜಯ ತಾಯಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಗ್ಯಾಪ್ ನ ಬಳಿಕ ಉಮಾಶ್ರೀ ರತ್ನನ್ ಪ್ರಪಂಚ ಸಿನಿಮಾ ಮೂಲಕ ನಟಿ ಉಮಾಶ್ರೀ ವಾಪಸ್ ಆಗಿದ್ದಾರೆ.

ಧನಂಜಯ ನಾಯಕ ಮತ್ತು ವಿಲನ್ ಎರಡು ಪಾತ್ರಗಳನ್ನು ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಸದ್ಯ ಧನಂಜಯ್ ಸಲಗ, ಪೊಗರು, ಯುವರತ್ನ, ಡಾಲಿ, ತೋತಾಪುರಿ, ಬಡವ ರಾಸ್ಕಲ್, ಹೆಡ್ ಬುಷ್, ಶಿವಪ್ಪ ಮತ್ತು ತೆಲುಗಿನ 'ಪುಷ್ಪ' ಸಿನಿಮಾದಲ್ಲಿ ಮಿಂಚುತ್ತಿದ್ದಾರೆ. ಅಲ್ಲದೆ ಇನ್ನೂ ಹೆಸರಿಡದ ಸಾಕಷ್ಟು ಸಿನಿಮಾಗಳು ಧನಂಜಯ್ ಬಳಿ ಇವೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm