ಬ್ರೇಕಿಂಗ್ ನ್ಯೂಸ್
05-01-21 12:26 pm Source: FILMIBEAT ಸಿನಿಮಾ
ಕಿರುತೆರೆ ನಟ ಮತ್ತು ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಸಿಂಗ್ ಮಲ್ಖಾನಿ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ನಿಶಾಂತ್ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರನ್ನು ನಟ ನಿಶಾಂತ್ ಚಲಾಯಿಸುತ್ತಿದ್ದು, ಎದುರುಗಡೆಯಿಂದ ರಾಂಗ್ ಸೈಡ್ ನಲ್ಲಿ ಬಂದ ವಾಹನವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ರಸ್ತೆಯ ಪಕ್ಕದ ಪ್ರಪಾತಕ್ಕೆ ಬಿದ್ದ ಕಾರನ್ನು ಕ್ರೇನ್ ಬಳಸಿ ಮೇಲೆತ್ತಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕಾರಿನಲ್ಲಿ ನಿಶಾಂತ್ ಮತ್ತು ಸ್ನೇಹಿತರು ರಾಜಸ್ಥಾನಕ್ಕೆ ತೆರಳುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿರುವ ನಿಶಾಂತ, ಯಾರು ಭಯಪಡುವ ಅವಶ್ಯಕತೆ ಇಲ್ಲ. ಸಣ್ಣ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತಾಯಿಯ ಆಶೀರ್ವಾದ ಮತ್ತು ದೇವರ ದಯೆಯಿಂದ ಏನು ಆಗಿಲ್ಲ ಎಂದಿದ್ದಾರೆ.
ಕಾರು ನಾನೆ ಚಲಾಯಿಸುತ್ತಿದ್ದೆ. ಎದುರು ರಾಂಗ್ ಸೈಡ್ ನಿಂದ ವ್ಯಾನ್ ಬರ್ತಿರೊದನ್ನು ನೋಡಿ ಸೈಡ್ ತೆಗೆದುಕೊಳ್ಳಲು ಹೋಗಿ ಕೆಳಗೆ ಉರುಳಿದೆವು. ರಸ್ತೆ ತುಂಬಾ ಕಿರಿದಾಗಿತ್ತು. ನನ್ನ ಜೊತೆ ಇದ್ದ ಸ್ನೇಹಿತರು ಸುರಕ್ಷಿತರಾಗಿದ್ದಾರೆ. ಆದರೆ ನಮ್ಮ ಕಾರಿಗೆ ಹೊಡೆದ ಗಾಡಿ ತಕ್ಷಣ ಎಸ್ಕೇಪ್ ಆಗಿದೆ. ಕಾರಿನನಿಂದ ಹೊರಬಂದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದೆವು' ಎಂದು ನಿಶಾಂತ್ ಅಪಘಾತದ ಬಗ್ಗೆ ವಿವರಿಸಿದ್ದಾರೆ.
ನಿಶಾಂತ್ ಕಳೆದ ವರ್ಷ ಹಿಂದಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮನೆಯಿಂದ ಬೇಗ ಔಟ್ ಆಗಿ ಭಾರಿ ಬೇಸರ ಮಾಡಿಕೊಂಡಿದ್ದರು. ಬಿಗ್ ಮನೆಯಿಂದ ಹೊರಬಂದ ಬಳಿಕ ಬಿಗ್ ಬಾಸ್ ಸಹ ಸ್ಪರ್ಧಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಅಪಘಾತದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am