ಬ್ರೇಕಿಂಗ್ ನ್ಯೂಸ್
03-05-26 09:15 pm HK News Staffer ಸಿನಿಮಾ
ಬೆಂಗಳೂರು, ಮೇ 3: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಸುಪ್ರೀಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದು ಜೈಲಿನ ಒಳಗಿನ ಸ್ಥಿತಿಗತಿ ಮತ್ತು ತಮ್ಮ ವೃತ್ತಿಜೀವನಕ್ಕೆ ಎದುರಾಗಿರುವ ಸಂಕಷ್ಟಗಳ ಬಗ್ಗೆ ಅಳಲು ತೋಡಿಕೊಂಡಿದ್ದಾರೆ.
ಜೈಲಿನಲ್ಲಿ ತನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ದರ್ಶನ್ ದೂರಿದ್ದಾರೆ. ಮೇ 4ರಂದು ಅರ್ಜಿ ವಿಚಾರಣೆ ನಡೆಯಲಿದ್ದು ಎಲ್ಲಾ ಅಂಶಗಳನ್ನು ಪರಿಗಣಿಸಿ ಸುಪ್ರೀಂ ಯಾವ ಆದೇಶ ನೀಡಲಿದೆ ಎನ್ನುವ ಕುತೂಹಲ ಇದೆ. ಜೈಲಿನ ನಿಯಮಗಳನ್ನು ಮೀರಿ ನನ್ನನ್ನು ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಹಿಂಸೆಯಾಗುತ್ತಿದೆ. ಸಹ ಕೈದಿಗಳಿಂದ ನಿರಂತರ ಬೆದರಿಕೆ, ನಿಂದನೆ ಮತ್ತು ಮೂದಲಿಕೆಯನ್ನು ಅನುಭವಿಸುತ್ತಿದ್ದೇನೆ. ಮಾಧ್ಯಮಗಳಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಪ್ರಚಾರದಿಂದ ಜೈಲಿನ ಒಳಗಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ ಎಂದು ನೋವು ತೋಡಿಕೊಂಡಿದ್ದಾರೆ.
ಇತರ ಕೈದಿಗಳಿಗೆ ಹೋಲಿಸಿದರೆ ತಾರತಮ್ಯ ಎಸಗುತ್ತಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರೂ ಕೇವಲ 2-3 ಬಾರಿ ಮಾತ್ರ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ತನ್ನ ವೃತ್ತಿಜೀವನದ ಮೇಲೆ ಈ ಜೈಲುವಾಸ ಬೀರುತ್ತಿರುವ ಪರಿಣಾಮದ ಬಗ್ಗೆ ವಿವರಿಸಿರುವ ದರ್ಶನ್, “ಪ್ರತಿ ವರ್ಷ ನಾನು 2 ರಿಂದ 3 ಸಿನಿಮಾಗಳನ್ನು ಮಾಡುತ್ತಿದ್ದೆ. ಜಾಮೀನು ರದ್ದಾಗುವ ವೇಳೆಯೂ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮೀಡಿಯಾ ಹೌಸ್ ಸ್ಟೂಡಿಯೋಸ್ನಂತಹ ದೊಡ್ಡ ಸಂಸ್ಥೆಗಳ ಚಿತ್ರಗಳಿಗೆ ಸಹಿ ಮಾಡಿದ್ದೆ. ನಿರ್ಮಾಪಕರು ಈಗಾಗಲೇ ಸುಮಾರು 6 ಕೋಟಿ ರೂ. ಬಂಡವಾಳ ಹೂಡಿದ್ದಾರೆ. ಸುದೀರ್ಘ ಜೈಲು ವಾಸದಿಂದ ನನ್ನ ಜೀವನಕ್ಕೆ ತೊಂದರೆಯಾಗಿದ್ದು, ಇದು ನನ್ನ ವೃತ್ತಿಜೀವನಕ್ಕೆ ಮರಣಗಂಟೆಯಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ತನಿಖೆ ಮತ್ತು ಸಾಕ್ಷ್ಯ ವಿಚಾರಣೆಯ ವಿಳಂಬದ ಬಗ್ಗೆಯೂ ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳ ವಿಚಾರಣೆ ನಡೆಸಬೇಕೆಂದು ಉಲ್ಲೇಖಿಸಲಾಗಿದೆ. ಆದರೆ ಕಳೆದ 8 ತಿಂಗಳಿನಿಂದ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಸದ್ಯಕ್ಕೆ ಈ ಪ್ರಕ್ರಿಯೆ ಮುಗಿಯುವ ಲಕ್ಷಣಗಳಿಲ್ಲ. ಇಷ್ಟು ದೀರ್ಘ ಕಾಲ ವಿಚಾರಣಾಧೀನ ಕೈದಿಯಾಗಿ ಇರಿಸುವುದು ಮೂಲಭೂತ ಹಕ್ಕಿನ ಹರಣವಾಗುತ್ತದೆ ಎಂದು ವಾದಿಸಿ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
23-05-26 11:54 am
HK News Staffer
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm