ಬ್ರೇಕಿಂಗ್ ನ್ಯೂಸ್
03-05-26 09:15 pm HK News Staffer ಸಿನಿಮಾ
ಬೆಂಗಳೂರು, ಮೇ 3: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಸುಪ್ರೀಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದು ಜೈಲಿನ ಒಳಗಿನ ಸ್ಥಿತಿಗತಿ ಮತ್ತು ತಮ್ಮ ವೃತ್ತಿಜೀವನಕ್ಕೆ ಎದುರಾಗಿರುವ ಸಂಕಷ್ಟಗಳ ಬಗ್ಗೆ ಅಳಲು ತೋಡಿಕೊಂಡಿದ್ದಾರೆ.
ಜೈಲಿನಲ್ಲಿ ತನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ದರ್ಶನ್ ದೂರಿದ್ದಾರೆ. ಮೇ 4ರಂದು ಅರ್ಜಿ ವಿಚಾರಣೆ ನಡೆಯಲಿದ್ದು ಎಲ್ಲಾ ಅಂಶಗಳನ್ನು ಪರಿಗಣಿಸಿ ಸುಪ್ರೀಂ ಯಾವ ಆದೇಶ ನೀಡಲಿದೆ ಎನ್ನುವ ಕುತೂಹಲ ಇದೆ. ಜೈಲಿನ ನಿಯಮಗಳನ್ನು ಮೀರಿ ನನ್ನನ್ನು ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಹಿಂಸೆಯಾಗುತ್ತಿದೆ. ಸಹ ಕೈದಿಗಳಿಂದ ನಿರಂತರ ಬೆದರಿಕೆ, ನಿಂದನೆ ಮತ್ತು ಮೂದಲಿಕೆಯನ್ನು ಅನುಭವಿಸುತ್ತಿದ್ದೇನೆ. ಮಾಧ್ಯಮಗಳಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಪ್ರಚಾರದಿಂದ ಜೈಲಿನ ಒಳಗಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ ಎಂದು ನೋವು ತೋಡಿಕೊಂಡಿದ್ದಾರೆ.
ಇತರ ಕೈದಿಗಳಿಗೆ ಹೋಲಿಸಿದರೆ ತಾರತಮ್ಯ ಎಸಗುತ್ತಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರೂ ಕೇವಲ 2-3 ಬಾರಿ ಮಾತ್ರ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ತನ್ನ ವೃತ್ತಿಜೀವನದ ಮೇಲೆ ಈ ಜೈಲುವಾಸ ಬೀರುತ್ತಿರುವ ಪರಿಣಾಮದ ಬಗ್ಗೆ ವಿವರಿಸಿರುವ ದರ್ಶನ್, “ಪ್ರತಿ ವರ್ಷ ನಾನು 2 ರಿಂದ 3 ಸಿನಿಮಾಗಳನ್ನು ಮಾಡುತ್ತಿದ್ದೆ. ಜಾಮೀನು ರದ್ದಾಗುವ ವೇಳೆಯೂ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮೀಡಿಯಾ ಹೌಸ್ ಸ್ಟೂಡಿಯೋಸ್ನಂತಹ ದೊಡ್ಡ ಸಂಸ್ಥೆಗಳ ಚಿತ್ರಗಳಿಗೆ ಸಹಿ ಮಾಡಿದ್ದೆ. ನಿರ್ಮಾಪಕರು ಈಗಾಗಲೇ ಸುಮಾರು 6 ಕೋಟಿ ರೂ. ಬಂಡವಾಳ ಹೂಡಿದ್ದಾರೆ. ಸುದೀರ್ಘ ಜೈಲು ವಾಸದಿಂದ ನನ್ನ ಜೀವನಕ್ಕೆ ತೊಂದರೆಯಾಗಿದ್ದು, ಇದು ನನ್ನ ವೃತ್ತಿಜೀವನಕ್ಕೆ ಮರಣಗಂಟೆಯಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ತನಿಖೆ ಮತ್ತು ಸಾಕ್ಷ್ಯ ವಿಚಾರಣೆಯ ವಿಳಂಬದ ಬಗ್ಗೆಯೂ ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳ ವಿಚಾರಣೆ ನಡೆಸಬೇಕೆಂದು ಉಲ್ಲೇಖಿಸಲಾಗಿದೆ. ಆದರೆ ಕಳೆದ 8 ತಿಂಗಳಿನಿಂದ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಸದ್ಯಕ್ಕೆ ಈ ಪ್ರಕ್ರಿಯೆ ಮುಗಿಯುವ ಲಕ್ಷಣಗಳಿಲ್ಲ. ಇಷ್ಟು ದೀರ್ಘ ಕಾಲ ವಿಚಾರಣಾಧೀನ ಕೈದಿಯಾಗಿ ಇರಿಸುವುದು ಮೂಲಭೂತ ಹಕ್ಕಿನ ಹರಣವಾಗುತ್ತದೆ ಎಂದು ವಾದಿಸಿ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm