ಬ್ರೇಕಿಂಗ್ ನ್ಯೂಸ್
05-01-21 04:45 pm Source: FILMIBEAT Shruthi Gk ಸಿನಿಮಾ
ತಮಿಳಿನ ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಸದ್ಯ ವಿಜಯ್ ನಟನೆಯ ಮಾಸ್ಟರ್ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ದಳಪತಿ ವಿಜಯ್ ಅಭಿನಯದ ಮಾಸ್ಟರ್ ಸಿನಿಮಾ ಇದೇ ತಿಂಗಳು 13ರಂದು ರಿಲೀಸ್ ಆಗುತ್ತಿದೆ. ತಮಿಳು ಮಾತ್ರವಲ್ಲದೆ ದಕ್ಷಿಣ ಭಾರತದ ಎಲ್ಲಾ ಭಾಷೆ ಜೊತೆಗೆ ಹಿಂದಿಯಲ್ಲೂ ತೆರೆಗೆ ಬರುತ್ತಿರುವುದು ವಿಶೇಷ. ಸದ್ಯ ಮಾಸ್ಟರ್ ಸಿನಿಮಾದ ರಿಲೀಸ್ ನ ಬ್ಯುಸಿಯಲ್ಲಿರುವ ನಿರ್ದೇಶಕ ಲೋಕೇಶ್ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಹೌದು, ಮಾಸ್ಟರ್ ರಿಲೀಸ್ ಗೂ ಮೊದಲೇ ಲೋಕೇಶ್ ತೆಲುಗಿನ ಸ್ಟಾರ್ ನಟನ ಜೊತೆ ಸಿನಿಮಾ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದಹಾಗೆ ಆ ನಟ ನಟ ಮತ್ಯಾರು ಅಲ್ಲ ರಾಮ್ ಚರಣ್.
ಹೌದು, ಈಗಾಗಲೇ ಲೋಕೇಶ್, ರಾಮ್ ಚರಣ್ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನುವ ಮಾತುಗಳು ಕಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಅಂದಹಾಗೆ ಮಾಸ್ಟರ್ ಸಿನಿಮಾ ಬಳಿಕ ಲೋಕೇಶ್ ಜೊತೆ ಸಿನಿಮಾ ಮಾಡಲು ಸ್ಟಾರ್ ನಟರು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಲೋಕೇಶ್, ರಾಮ್ ಚರಣ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ರಾಮ್ ಚರಣ್ ಗಾಗಿ ಸ್ಕ್ರಿಪ್ಟ್ ಕೆಲಸವನ್ನು ಪ್ರಾರಂಭಿಸಿದ್ದಾರಂತೆ.
ಅಂದಹಾಗೆ ಲೋಕೇಶ್ ಈಗಾಗಲೇ ಕಮಲ್ ಹಾಸನ್ ಜೊತೆ ವಿಕ್ರಮ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಕಮಲ್ ಹಾಸನ್ ಜೊತೆ ಸಿನಿಮಾ ಮುಗಿದ ಬಳಿಕ ತೆಲುಗು ಸಿನಿಮಾರಂಗಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ತಮಿಳಿನಲ್ಲಿ 4 ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಲೋಕೇಶ್ ಒಂದು ವೇಳೆ ರಾಮ್ ಚರಣ್ ಗೆ ಆಕ್ಷನ್ ಕಟ್ ಹೇಳಿದ್ರೆ ಮೊದಲ ಬಾರಿಗೆ ತೆಲುಗಿನಲ್ಲಿ ಅದೃಷ್ಟ ಪರೀಕ್ಷೆಗೆ ನಿಲ್ಲಲಿದ್ದಾರೆ. ರಾಮ್ ಚರಣ್ ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಸಿನಿಮಾ ನಿರ್ಮಾಣದ ಕಡೆಯೂ ಗಮನ ಹರಿಸಿದ್ದಾರೆ. ಇತ್ತ ಲೋಕೇಶ್ ಕನಗರಾಜ್ ಸಹ ಕಮಲ್ ಜೊತೆ ವಿಕ್ರಮ್ ನಲ್ಲಿ ನಿರತರಾಗಿದ್ದಾರೆ.
ವಿಕ್ರಮ್ ಬಳಿಕ ರಾಮ್ ಚರಣ್ ಜೊತೆ ಹೊಸ ಸಿನಿಮಾ ಪ್ರಾರಂಭ ಮಾಡುವ ಸಾಧ್ಯತೆ ಇದೆ. ಸದ್ಯ ಅಭಿಮಾನಿಗಳ ಚಿತ್ತ ಮಾಸ್ಟರ್ ಸಿನಿಮಾದ ಮೇಲಿದೆ. ತಮಿಳು ನಾಡಿನಲ್ಲಿ ಈಗಾಗಲೇ ಶೇ.100 ಆಸನ ಭರ್ತಿಗೆ ಅವಕಾಶ ನೀಡಿದ್ದಾರೆ. ಲಾಕ್ ಡೌನ್ ಬಳಿಕ ರಿಲೀಸ್ ಆಗುತ್ತಿರುವ ಸ್ಟಾರ್ ನಟನ ಸಿನಿಮಾ ಇದಾಗಿದ್ದು, ಅಭಿಮಾನಿಗಳ ಪ್ರತಿಕ್ರಿಯೆ ಹೇಗಿರಲಿದೆ, ಚಿತ್ರಮಂದಿರಕ್ಕ ಜನ ಬರ್ತಾರಾ ಎನ್ನುವ ಕುತೂಹಲ ಎಲ್ಲರೂ ಹೆಚ್ಚಾಗಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm