ಬ್ರೇಕಿಂಗ್ ನ್ಯೂಸ್
05-01-21 04:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಮಗನ ಮುಡಿ ಕೊಟ್ಟ ಬಳಿಕ ರಾಧಿಕಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯಥರ್ವ ಯಶ್ ಹೊಸ ಗೆಟಪ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ.
ಅಂದಹಾಗೆ ಯಥರ್ವ ಜನಿಸಿ 14 ತಿಂಗಳಾಗಿದೆ. ಇತ್ತೀಚಿಗಷ್ಟೆ ಅಂದರೆ ಅಕ್ಟೋಬರ್ 30ರಂದು ಮಗನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದರು. ಕೊರೊನಾ ಹಾವಳಿಯ ಪರಿಣಾಮ ಕುಟುಂಬದವರು ಮತ್ತು ತೀರ ಆಪ್ತರ ನಡುವೆ ಗೋವಾದ ಕಡಲ ಕಿನಾರೆಯಲ್ಲಿ ಮಗನ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದರು.
ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ತಂದೆ-ಮಗ
ಮೊದಲ ವರ್ಷದ ಹುಟ್ಟುಹಬ್ಬ ಆಚರಿಸಿ ಎರಡು ತಿಂಗಳಾಗಿದೆ. ಇದೀಗ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ಯಥರ್ವ ತಂದೆಯ ತೋಳಿನಲ್ಲಿ ನಗೆಬೀರುತ್ತಿರುವ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದಾರೆ. ಯಶ್ ಮತ್ತು ಯಥರ್ವ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಪಂಚೆ ಮತ್ತು ಹಸಿರು ಬಣ್ಣದ ಶರ್ಟ್ ನ್ ನಲ್ಲಿ ಪುಟ್ಟ ಪೋರ ಯಥರ್ವ ಕಂಗೊಳಿಸುತ್ತಿದ್ದಾರೆ.
ತನ್ನದೇ ಗೆಟಪ್ ನೋಡಿ ತಲೆಮೇಲೆ ಕೈ ಇಟ್ಟ ಯಥರ್ವ
ಮತ್ತೊಂದು ಫೋಟೋದಲ್ಲಿ ಯಥರ್ವ ಕನ್ನಡಿ ನೋಡಿಕೊಳ್ಳುತ್ತಾ ತನ್ನದೆ ಗೆಟಪ್ ನೋಡಿ ಅಶ್ಚರ್ಯಗೊಂಡು ತೆಲೆಮೇಲೆ ಕೈಹೊತ್ತು ಕುಳಿತಿದ್ದಾನೆ. ಈ ಎಡರು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಹರಿದುಬರುತ್ತಿದೆ.
ನಂಜುಂಡೇಶ್ವರ ಸನ್ನಿಧಿಯಲ್ಲಿ ಮಗಳ ಮುಡಿ ಕೊಡಿಸಿದ್ದ ಯಶ್ ದಂಪತಿ ಅಂದಹಾಗೆ ಯಶ್ ಮತ್ತು ರಾಧಿಕಾ ದಂಪತಿ ಮೊದಲ ಮಗಳು ಐರಾ ಮುಡಿಯನ್ನು ದಕ್ಷಿಣ ಕಾಶಿ ಎಂದೇ ಖ್ಯಾತಿಗಳಿಸಿರುವ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಕೊಡಿಸುವ ಮೂಲಕ ಹರಕೆ ಪೂರೈಸಿದ್ದರು. ಕಳೆದ ವರ್ಷ ಮಾರ್ಚ್ ನಲ್ಲಿ ಐರಾ ಕೇಶಮುಂಡನ ಮಾಡಿಸಿದ್ದರು. ಇದೀಗ ಎರಡನೇ ಪುತ್ರ ಯಥರ್ವ ಯಶ್ ಗೆ ಕೇಶ ಮುಂಡನಮಾಡಿಸಿದ್ದು, ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am