ಬ್ರೇಕಿಂಗ್ ನ್ಯೂಸ್
06-01-21 11:14 am Source: FILMIBEAT ಸಿನಿಮಾ
'ಮನಸೆಲ್ಲಾ ನೀನೆ' ಸಿನಿಮಾವನ್ನು ಕನ್ನಡ ಸಿನಿಪ್ರೇಮಿಗಳು ಮರೆತಿರಲಿಕ್ಕಿಲ್ಲ. ತೆಲುಗಿನಲ್ಲಿ ಹಿಟ್ ಆಗಿದ್ದ 'ಮನಸಂತಾ ನೂವೆ' ಸಿನಿಮಾದ ಕನ್ನಡ ರೀಮೇಕ್ ಆದ ಈ ಸಿನಿಮಾ ಕನ್ನಡದಲ್ಲಿಯೂ ಸಖತ್ ಹಿಟ್ ಆಗಿತ್ತು. ಸಿನಿಮಾದ ನಾಯಕ ಪ್ರಸಾದ್ ಅಲಿಯಾಸ್ ನಾಗೇಂದ್ರ ಪ್ರಸಾದ್ ತಮ್ಮ ಅಮಾಯಕ ಭಾವದ ಅಭಿನಯ, ಅದ್ಭುತವಾದ ಡಾನ್ಸ್ ನಿಂದ ಎಲ್ಲರ ಗಮನ ಸೆಳೆದಿದ್ದರು. ಆದರೆ ಅದ್ಯಾಕೊ ಏನೊ ಕನ್ನಡದಲ್ಲಿ ಅದೇ ಅವರ ಕೊನೆಯ ಸಿನಿಮಾ ಆಗಿಬಿಟ್ಟಿತು. ಆದರೆ ಈಗ ಅದೇ ನಾಗೇಂದ್ರ ಪ್ರಸಾದ್ ಕನ್ನಡಕ್ಕೆ ವಾಪಸ್ ಬಂದಿದ್ದಾರೆ. ಆದರೆ ಈ ಬಾರಿ ನಟನಾಗಿ ಅಲ್ಲದೆ ನಿರ್ದೇಶಕನಾಗಿ ಬಂದಿದ್ದಾರೆ. ಕನ್ನಡದಲ್ಲಿ ಸಿನಿಮಾವೊಂದನ್ನು ನಿರ್ದೇಶಿಸಲಿದ್ದಾರೆ ನಾಗೇಂದ್ರ ಪ್ರಸಾದ್. ತಮಿಳಿನಲ್ಲಿ ಈಗಾಗಲೇ ಹಿಟ್ ಆಗಿರುವ ಕಾಮಿಡಿ-ಪ್ರೇಮಕತಾ ಸಿನಿಮಾ 'ಓಹ್ ಮೈ ಕಡವಲೆ' ಸಿನಿಮಾವನ್ನು ಕನ್ನಡಕ್ಕೆ ತರುತ್ತಿದ್ದಾರೆ ಪ್ರಸಾದ್. ನಟ-ನಟಿಯರು ಇನ್ನೂ ಅಂತಿಮವಾಗಿಲ್ಲ, ಆದರೆ ಕೆಲವು ಹೆಸರಾಂತ ನಟ-ನಟಿಯರ ಹೆಸರನ್ನು ಪಟ್ಟಿಮಾಡಿಕೊಂಡಿದ್ದಾರಂತೆ ನಾಗೇಂದ್ರಪ್ರಸಾದ್.
ತಮಿಳಿನಲ್ಲಿ ಹಿಟ್ ಸಿನಿಮಾ 'ಓಹ್ ಮೈ ಕಡವುಲೆ'
ತಮಿಳಿನಲ್ಲಿ ಓಹ್ ಮೈ ಕಡವುಲೆ ಸಿನಿಮಾದಲ್ಲಿ ಅಶೋಕ್ ಸೆಲ್ವನ್, ರಿತಿಕಾ ಸಿಂಗ್, ಶಾ ರಾ, ರಮೇಶ್ ತಾಯಿಕ್ ನಟಿಸಿದ್ದಾರೆ. ಸಿನಿಮಾದಲ್ಲಿ ವಿಜಯ್ ಸೇತುಪತಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾವನ್ನು ಅಶ್ವತ್ಥ ಮಾರಿಮುತ್ತು ನಿರ್ದೇಶಿಸಿದ್ದಾರೆ.
ನೃತ್ಯ ನಿರ್ದೇಶಕನಾಗಿ ಯಶಸ್ವಿಯಾಗಿರುವ ನಾಗೇಂದ್ರ ಪ್ರಸಾದ್
ಜೀನ್ಸ್, ಚಾಕಲೇಟ್, ಮಿನ್ನಲೆ, ಉದಯಂ ಎನ್ಎಚ್ 4 ಇನ್ನೂ ಹಲವು ಸಿನಿಮಾಗಳಿಗೆ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಪ್ರಸಾದ್, ಪ್ರಸ್ತುತ ವಿಜಯ್ ಸೇತುಪತಿ ನಟನೆಯ 'ಲಾಭಂ' ಕಂಗನಾ ನಟನೆಯ 'ತಲೈವಿ' ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ.
'ಅನುಭವ ಗಳಿಸಿದ ಬಳಿಕವೇ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದೇನೆ'
ಸಾಕಷ್ಟು ಸಿನಿಮಾಗಳಿಗೆ ನೃತ್ಯ ನಿರ್ದೇಶಕನಾಗಿ ಹಾಗೂ ಅಣ್ಣ ಪ್ರಭುದೇವಾ ನಿರ್ದೇಶಿಸುವ ಸಿನಿಮಾಗಳಿಗೆ ಸಹಾಯಕನಾಗಿ ಕೆಲಸ ಮಾಡಿದ್ದೇನೆ. ಸೂಕ್ತ ಅನುಭವ ಗಳಿಸಿದ ಬಳಿಕವೇ ನಿರ್ದೇಶನ ಆರಂಭಿಸಬೇಕು ಎಂದುಕೊಂಡಿದ್ದೆ ಈಗ ಅನುಭವ ದೊರೆತಿದ್ದು, ಮೊದಲ ಸಿನಿಮಾ ನಿರ್ದೇಶನ ಮಾಡಲು ತಯಾರಿ ಆರಂಭಿಸಿದ್ದೇನೆ ಎಂದಿದ್ದಾರೆ ನಾಗೇಂದ್ರಪ್ರಸಾದ್.
ಕನ್ನಡದಲ್ಲಿ ಕೆಲವು ಸಿನಿಮಾಗಳಲ್ಲಿ ನಟನೆ
ಕನ್ನಡಿಗ ಮೂಗೂರು ಸುಂದರಂ ಮಗನಾಗಿರುವ, ಡಾನ್ಸ್ ಮಾಸ್ಟರ್ಗಳಾದ ಪ್ರಭುದೇವಾ, ರಾಜಸುಂದರಂ ಅವರುಗಳ ಕಿರಿಯ ತಮ್ಮ ಪ್ರಸಾದ್ ಕನ್ನಡದಲ್ಲಿ ಚಿತ್ರ, 123, ಮನಸೆಲ್ಲಾ ನೀನೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮಿಳಿನಲ್ಲಿ ಸಹ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ ನಾಗೇಂದ್ರ ಪ್ರಸಾದ್.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 05:20 pm
Bangalore Correspondent
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm