ಬ್ರೇಕಿಂಗ್ ನ್ಯೂಸ್
06-01-21 12:47 pm Source: FILMIBEAT ಸಿನಿಮಾ
ತೆಲುಗಿನ ಖ್ಯಾತ ಗೀತರಚನೆಕಾರ ಮತ್ತು ಸಂಭಾಷಣೆಗಾರ ವೆನ್ನಲಕಂಟಿ ರಾಜೇಶ್ವರ ಪ್ರಸಾದ್ ಮಂಗಳವಾರ ಚೆನ್ನೈನ ತನ್ನ ನಿವಾಸದಲ್ಲಿ ನಿಧರಾಗಿದ್ದಾರೆ. 64 ವರ್ಷದ ವೆನ್ನಲಕಂಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
3 ದಶಕಗಳ ವೃತ್ತಿ ಜೀವನದಲ್ಲಿ ವೆನ್ನಲಕಂಟಿ ಸುಮಾರು 2000ಕ್ಕೂ ಹೆಚ್ಚು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. 300 ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಪ್ರಸಿದ್ಧಿ ಗಳಿಸಿದ್ದ ವೆನ್ನಲಕಾಂತಿ1957ರಲ್ಲಿ ನೆಲ್ಲೂರಿನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವೆನ್ನಲಕಂಟಿ ಕವನ ಬರೆಯಲು ಪ್ರಾರಂಭಿಸಿದ್ದರು.
1986ರಲ್ಲಿ, ವೆನ್ನಲಕಂಟಿ 'ಶ್ರೀ ರಾಮಚಂದ್ರಡು' ಚಿತ್ರದ ಹಾಡುಗಳಿಗೆ ಸಾಹಿತ್ಯ ರಚಿಸುವ ಮೂಲಕ ಗೀತರಚನೆಕಾರರಾಗಿ ಪದಾರ್ಪಣೆ ಮಾಡಿದರು. ವೆನ್ನಲಕಂಟಿ ರಚನೆಯ ಅನೇಕ ಹಾಡುಗಳು ಸೂಪರ್ ಹಿಟ್ ಆಗಿವೆ. ಆದಿತ್ಯ 369 ಸಿನಿಮಾ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಾಯಿತು. ಘರಾನಾ ಬುಲ್ಲೊಡು, ಸಮರಸಿಂಹರೆಡ್ಡಿ, ಕ್ರಿಮಿನಲ್, ತಕ್ಕರಿ ಡೊಂಗಾ ಸೇರಿದಂತೆ ಅನೇಕ ಪ್ರಸಿದ್ಧ ಸಿನಿಮಾಗಳಿಗೆ ಹಾಡನ್ನು ಬರೆದಿದ್ದಾರೆ.
ವೆನ್ನಲಕಂಟಿ ಕೊನೆಯದಾಗಿ ನಟಿ ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾಗೆ ಸಾಹಿತ್ಯ ರಚಿಸಿದ್ದಾರೆ. ಈ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿದೆ. ವೆನ್ನಲಕಂಟಿ ನಿಧನಕ್ಕೆ ತೆಲುಗು ಸಿನಿಮಾರಂಗ ಕಂಬನಿ ಮಿಡಿದಿದೆ. ವೆನ್ನಲಕಂಟಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಮಕ್ಕಳು ಸಹ ಗೀತರಚನೆಕಾರರಾಗಿ ಗುರುತಿಸಿಕೊಂಡಿದ್ದಾರೆ.
This News Article is a Copy of FILMIBEAT
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm