ಬ್ರೇಕಿಂಗ್ ನ್ಯೂಸ್
07-01-21 04:14 pm Source: FILMIBEAT Bharath Kumar K ಸಿನಿಮಾ
ಕೊರೊನಾದಿಂದ ಚಿತ್ರರಂಗಕ್ಕೆ ಬಹಳ ದೊಡ್ಡ ಸಮಸ್ಯೆ ಎದುರಾಗಿತ್ತು. ತಿಂಗಳುಗಳ ಕಾಲ ಚಿತ್ರಮಂದಿರ ಮುಚ್ಚಿದ್ದವು. ಶೇಕಡಾ 50 ರಷ್ಟು ಆಸನ ಭರ್ತಿಯೊಂದಿಗೆ ಸಿನಿಮಾ ಥಿಯೇಟರ್ ತೆರೆಯಲು ಅನುಮತಿ ಸಿಕ್ಕಿದ್ದರೂ ಚಿತ್ರಮಂದಿರಕ್ಕೆ ಜನ ಬರ್ತಿಲ್ಲ. ಇಂತಹ ಸಂದರ್ಭದಲ್ಲಿ ದೊಡ್ಡ ಚಿತ್ರಗಳು ರಿಲೀಸ್ ಮಾಡಿದ್ರೆ ಹಾಕಿದ ಬಂಡವಾಳ ಹೇಗೆ ವಾಪಸ್ ಪಡೆಯುವುದು ಎಂಬ ಗೊಂದಲದಲ್ಲಿ ನಿರ್ಮಾಪಕರಿದ್ದಾರೆ. ಈ ನಡುವೆ ಥಿಯೇಟರ್ಗಿಂತ ಒಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡುವುದು ಸೂಕ್ತವೇ ಎಂಬ ಅಭಿಪ್ರಾಯವೂ ಇದೆ. ತಮಿಳುನಾಡಿನಲ್ಲಿ ಶೇಕಡಾ 100ರಷ್ಟು ಆಸನ ಭರ್ತಿ ಮಾಡಿ ಪ್ರದರ್ಶನ ಆರಂಭಿಸಲು ಸರ್ಕಾರ ಸಮ್ಮತಿ ಸೂಚಿಸಿದೆ. ಬಹುಶಃ ಕರ್ನಾಟಕದಲ್ಲೂ ಈ ಆದೇಶ ಜಾರಿಯಾಗಬಹುದು ಎಂಬ ಲೆಕ್ಕಾಚಾರದಲ್ಲಿದ್ದ ನಿರ್ಮಾಪಕರಿಗೆ ಕೇಂದ್ರ ಸರ್ಕಾರ ನಿರಾಸೆ ಮಾಡಿದೆ. ಹಾಗಾದ್ರೆ, ಈ ಸಭೆಯಲ್ಲಿ ಯಾವೆಲ್ಲ ವಿಷಯಗಳು ಚರ್ಚೆಯಾದವು? ಯಾರೆಲ್ಲಾ ನಿರ್ಮಾಪಕರು ಸೇರಿದ್ದರು?
ಸಿನಿಮಾಗಳು ಕ್ಲಾಶ್ ಆಗಬಾರದು!
ದರ್ಶನ್, ಸುದೀಪ್, ಪುನೀತ್ ರಾಜ್ ಕುಮಾರ್, ದುನಿಯಾ ವಿಜಯ್, ಯಶ್, ಶಿವರಾಜ್ ಕುಮಾರ್, ಧ್ರುವ ಸರ್ಜಾ ಹೀಗೆ ಸ್ಟಾರ್ ನಟರ ಚಿತ್ರಗಳು ಬಿಡುಗಡೆಗೆ ಸಾಲುಗಟ್ಟಿ ನಿಂತಿವೆ. ಕೆಲವು ಚಿತ್ರಗಳು ರಿಲೀಸ್ಗೆ ದಿನಾಂಕವನ್ನು ಲಾಕ್ ಮಾಡಿಕೊಂಡಿದೆ. ಹಿಂದೆಂದೆಯೇ ಸಿನಿಮಾ ಬಿಡುಗಡೆ ಮಾಡಿದ್ರೆ ಥಿಯೇಟರ್ ಸಮಸ್ಯೆ, ಕಲೆಕ್ಷನ್ ಸಮಸ್ಯೆ ಎದುರಾಗಬಹುದು ಎಂಬ ಆತಂಕ ಇದೆ. ಹಾಗಾಗಿ, ಚಿತ್ರಗಳ ನಡುವೆ ಕ್ಲಾಶ್ ಆಗಬಾರದು ಎಂಬ ಚರ್ಚೆ ಈ ಸಭೆಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.
ಒಟಿಟಿಗೆ ಹೋದ್ರೆ ಏನಾಗುತ್ತದೆ?
ಚಿತ್ರಮಂದಿರಕ್ಕೆ ಜನ ಬರ್ತಿಲ್ಲ ಎಂಬ ಕಾರಣಕ್ಕೆ ಒಟಿಟಿಗೆ ಹೋದ್ರೆ ಅಲ್ಲಿ ಹಾಕಿದ ಬಂಡವಾಳ ಪಾಪಸ್ ಬರುತ್ತಾ? ಇದರಿಂದ ಸ್ಟಾರ್ ನಟರ ಚಿತ್ರಗಳನ್ನೇ ನಂಬಿಕೊಂಡಿರುವ ಥಿಯೇಟರ್ ಮಾಲೀಕರ ಪರಿಸ್ಥಿತಿ ಏನು? ಕೊರೊನಾದಿಂದ ಸಂಕಷ್ಟದಲ್ಲಿರುವ ಎಲ್ಲರ ಹಿತಾದೃಷ್ಟಿ ಕಾಯುವುದು ಹೇಗೆ ಎಂಬ ಪ್ರಮುಖ ವಿಚಾರಗಳು ಚರ್ಚೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಥಿಯೇಟರ್ ಪೂರ್ಣ ಪ್ರಮಾಣದಲ್ಲಿ ಓಪನ್ ಆಗೋದು ಕಷ್ಟ!
ತಮಿಳು ನಟ ವಿಜಯ್ ಮನವಿ ನಂತರ ತಮಿಳು ಸರ್ಕಾರ ಥಿಯೇಟರ್ಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಆದ್ರೆ, ತಮಿಳುನಾಡಿನ ಆದೇಶ ಹಿಂಪಡೆಯುವಂತೆ ಕೇಂದ್ರ ಗೃಹ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ವಿಪತ್ತು ನಿರ್ವಹಣಾ ಕಾಯ್ದೆಯ ಉಲ್ಲಂಘನೆಯಾಗುತ್ತಿದೆ, ಕೂಡಲೇ ಆದೇಶ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಪತ್ರ ಬರೆದಿದೆ. ಈ ಬೆಳವಣಿಗೆ ಗಮನಿಸಿದರೆ ಸದ್ಯಕ್ಕೆ ಥಿಯೇಟರ್ಗಳ ಪರಿಸ್ಥಿತಿ ಸುಧಾರಿಸುವುದು ಬಹಳ ಕಷ್ಟ. ಇದು ಸಹ ನಿರ್ಮಾಪಕರಿಗೆ ತಲೆ ಬಿಸಿ ಉಂಟು ಮಾಡಿದೆ.
ಯಾರೆಲ್ಲ ಸಭೆಯಲ್ಲಿ ಹಾಜರಿದ್ದರು?
ನಿರ್ಮಾಪಕರ ಸಭೆಯಲ್ಲಿ ಕನ್ನಡದ ಪ್ರಮುಖ ಪ್ರೊಡ್ಯೂಸರ್ಗಳು ಭಾಗಿಯಾಗಿದ್ದರು. ಕೆಜಿಎಫ್, ಯುವರತ್ನ ನಿರ್ಮಾಪಕ ವಿಜಯ್ ಕಿರಗಂದೂರ್, ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ, ಸಲಗ ನಿರ್ಮಾಪಕ ಕೆಪಿ ಶ್ರೀಕಾಂತ್, ಕೋಟಿಗೊಬ್ಬ 3 ನಿರ್ಮಾಪಕ ಸೂರಪ್ಪ ಬಾಬು, ರಾಬರ್ಟ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ಫ್ಯಾಂಟಮ್ ನಿರ್ಮಾಪಕ ಜಾಕ್ ಮಂಜು, ನಿರ್ಮಾಪಕ ಜಯಣ್ಣ, ಪೊಗರು ನಿರ್ಮಾಪಕ ಪಾಲ್ಗೊಂಡಿದ್ದರು.
This News Article is a Copy of FILMIBEAT
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm