ಬ್ರೇಕಿಂಗ್ ನ್ಯೂಸ್
07-01-21 04:35 pm Source: FILMIBEAT Manjunatha C ಸಿನಿಮಾ
ಸೆಲೆಬ್ರಿಟಿಗಳಿಗೆ ಖಾಸಗಿತನ ಎಂಬುದು ಬಹಳ ಕಡಿಮೆ, ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳಿಗಂತೂ ಖಾಸಗಿತನ ಎಂಬುದು ಬಹುತೇಕ ಇಲ್ಲವೇ ಇಲ್ಲ ಎನ್ನುವಂತಾಗಿದೆ. ಮಾಧ್ಯಮಗಳ ಕ್ಯಾಮೆರಾಮನ್ಗಳು ಸದಾ ಸೆಲೆಬ್ರಿಟಿಗಳ ಮನೆಗಳ ಮುಂದೆ ಇದ್ದೇ ಇರುತ್ತಾರೆ. ಅವರು ಎಲ್ಲಿ ಹೋದರೂ ಹಿಂಬಾಲಿಸುತ್ತಾರೆ. ಹಲವು ಬಾಲಿವುಡ್ ಪತ್ರಿಕೆಗಳು ಹಲವು ಶಿಫ್ಟ್ಗಳಲ್ಲಿ ಸೆಲೆಬ್ರಿಟಿಗಳ ಮನೆಯ ಮುಂದೆ ಕ್ಯಾಮೆರಾಮನ್ಗಳನ್ನು ಕೆಲಸಕ್ಕೆ ಹಾಕಿರುತ್ತಾರೆ. ಸೆಲೆಬ್ರಿಟಿಗಳು ವಿದೇಶಕ್ಕೆ ಹೋದರೂ ಹಿಂಬಾಲಿಸುವವರಿದ್ದಾರೆ. ಪ್ರಸ್ತುತ ಅನುಷ್ಕಾ ಶರ್ಮಾ ಬಾಲಿವುಡ್ನ ಟಾಪ್ ಸೆಲೆಬ್ರಿಟಿ, ಅಮ್ಮನಾಗುತ್ತಿರುವ ಅನುಷ್ಕಾ ರ ಸಣ್ಣ ಕದಲಿಕೆಗಳೂ ಸುದ್ದಿಯಾಗುತ್ತಿವೆ. ಅವರ ಮನೆಯ ಮುಂದೆ ಕ್ಯಾಮೆರಾಮನ್ಗಳ ದಂಡೇ ಇರುತ್ತದೆ. ಎಲ್ಲಿ ಹೋದರೂ ಕ್ಯಾಮೆರಾ ಕ್ಲಿಕ್ಕಿಸಲಾಗುತ್ತದೆ. ವಿಡಿಯೋ ಮಾಡಲಾಗುತ್ತದೆ. ಇದರಿಂದ ಬೇಸತ್ತುಹೋಗಿದ್ದಾರೆ ನಟಿ ಅನುಷ್ಕಾ ಶರ್ಮಾ.

ಸಾಕು ಇದನ್ನು ನಿಲ್ಲಿಸಿ: ಅನುಷ್ಕಾ ಶರ್ಮಾ
'ಮನವಿಗಳನ್ನು ಮಾಡಿದ ಬಳಿಕವೂ ಒಬ್ಬ ಫೊಟೊಗ್ರಾಫರ್ ಮತ್ತು ಒಂದು ಪ್ರಕಟಣಾ ಸಂಸ್ಥೆ ನಮ್ಮ ಖಾಸಗಿತನವನ್ನು ಉಲ್ಲಂಘಿಸುತ್ತಿದ್ದಾರೆ. ದಯವಿಟ್ಟು ಇದನ್ನು ಇಲ್ಲಿಗೇ ನಿಲ್ಲಿಸಿಬಿಡಿ' ಎಂದಿದ್ದಾರೆ ಅನುಷ್ಕಾ ಶರ್ಮಾ.
ಚಿತ್ರ-ವಿಡಿಯೋ ಹಂಚಿಕೊಳ್ಳುವ ಅನುಷ್ಕಾ ಶರ್ಮಾ
ಗರ್ಭಿಣಿ ಅನುಷ್ಕಾ ಶರ್ಮಾ ತಮ್ಮ ಸಾಕಷ್ಟು ಚಿತ್ರಗಳು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅದಾಗ್ಯೂ ಅವರು ಎಲ್ಲಿ ಹೋದರೂ ಅವರನ್ನು ಹಿಂಬಾಲಿಸಿ ಅವರ ಖಾಸಗಿ ಕ್ಷಣಗಳನ್ನು ಸಹ ಕ್ಲಿಕ್ಕಿಸಿ ಮುದ್ರಿಸಲಾಗುತ್ತಿದೆ. ಇದು ಅನುಷ್ಕಾ ರಿಗೆ ಬೇಸರ ತಂದಿದೆ.

ಆಸ್ಟ್ರೇಲಿಯಾದಿಂದ ವಾಪಸ್ಸಾಗಿರುವ ವಿರಾಟ್ ಕೊಹ್ಲಿ
ನಟಿ ಅನುಷ್ಕಾ ಶರ್ಮಾ ಇದೇ ತಿಂಗಳಾಂತ್ಯದಲ್ಲಿ ಮಗುವನ್ನು ನಿರೀಕ್ಷಿಸುತ್ತಿದ್ದಾರೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಆಸ್ಟ್ರೇಲಿಯಾ ಪ್ರವಾಸದಿಂದ ರಜೆ ಪಡೆದು ಪತ್ನಿಯೊಂದಿಗೆ ಕಾಲ ಕಳೆಯಲು ಭಾರತಕ್ಕೆ ವಾಪಸ್ಸಾಗಿದ್ದಾರೆ. ಕೆಲವೇ ದಿನಗಳಲ್ಲಿ ಸಿಹಿ ಸುದ್ದಿ ನೀಡಲಿದ್ದಾರೆ ಅನುಷ್ಕಾ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am