ಬ್ರೇಕಿಂಗ್ ನ್ಯೂಸ್
07-01-21 04:35 pm Source: FILMIBEAT Manjunatha C ಸಿನಿಮಾ
ಸೆಲೆಬ್ರಿಟಿಗಳಿಗೆ ಖಾಸಗಿತನ ಎಂಬುದು ಬಹಳ ಕಡಿಮೆ, ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳಿಗಂತೂ ಖಾಸಗಿತನ ಎಂಬುದು ಬಹುತೇಕ ಇಲ್ಲವೇ ಇಲ್ಲ ಎನ್ನುವಂತಾಗಿದೆ. ಮಾಧ್ಯಮಗಳ ಕ್ಯಾಮೆರಾಮನ್ಗಳು ಸದಾ ಸೆಲೆಬ್ರಿಟಿಗಳ ಮನೆಗಳ ಮುಂದೆ ಇದ್ದೇ ಇರುತ್ತಾರೆ. ಅವರು ಎಲ್ಲಿ ಹೋದರೂ ಹಿಂಬಾಲಿಸುತ್ತಾರೆ. ಹಲವು ಬಾಲಿವುಡ್ ಪತ್ರಿಕೆಗಳು ಹಲವು ಶಿಫ್ಟ್ಗಳಲ್ಲಿ ಸೆಲೆಬ್ರಿಟಿಗಳ ಮನೆಯ ಮುಂದೆ ಕ್ಯಾಮೆರಾಮನ್ಗಳನ್ನು ಕೆಲಸಕ್ಕೆ ಹಾಕಿರುತ್ತಾರೆ. ಸೆಲೆಬ್ರಿಟಿಗಳು ವಿದೇಶಕ್ಕೆ ಹೋದರೂ ಹಿಂಬಾಲಿಸುವವರಿದ್ದಾರೆ. ಪ್ರಸ್ತುತ ಅನುಷ್ಕಾ ಶರ್ಮಾ ಬಾಲಿವುಡ್ನ ಟಾಪ್ ಸೆಲೆಬ್ರಿಟಿ, ಅಮ್ಮನಾಗುತ್ತಿರುವ ಅನುಷ್ಕಾ ರ ಸಣ್ಣ ಕದಲಿಕೆಗಳೂ ಸುದ್ದಿಯಾಗುತ್ತಿವೆ. ಅವರ ಮನೆಯ ಮುಂದೆ ಕ್ಯಾಮೆರಾಮನ್ಗಳ ದಂಡೇ ಇರುತ್ತದೆ. ಎಲ್ಲಿ ಹೋದರೂ ಕ್ಯಾಮೆರಾ ಕ್ಲಿಕ್ಕಿಸಲಾಗುತ್ತದೆ. ವಿಡಿಯೋ ಮಾಡಲಾಗುತ್ತದೆ. ಇದರಿಂದ ಬೇಸತ್ತುಹೋಗಿದ್ದಾರೆ ನಟಿ ಅನುಷ್ಕಾ ಶರ್ಮಾ.

ಸಾಕು ಇದನ್ನು ನಿಲ್ಲಿಸಿ: ಅನುಷ್ಕಾ ಶರ್ಮಾ
'ಮನವಿಗಳನ್ನು ಮಾಡಿದ ಬಳಿಕವೂ ಒಬ್ಬ ಫೊಟೊಗ್ರಾಫರ್ ಮತ್ತು ಒಂದು ಪ್ರಕಟಣಾ ಸಂಸ್ಥೆ ನಮ್ಮ ಖಾಸಗಿತನವನ್ನು ಉಲ್ಲಂಘಿಸುತ್ತಿದ್ದಾರೆ. ದಯವಿಟ್ಟು ಇದನ್ನು ಇಲ್ಲಿಗೇ ನಿಲ್ಲಿಸಿಬಿಡಿ' ಎಂದಿದ್ದಾರೆ ಅನುಷ್ಕಾ ಶರ್ಮಾ.
ಚಿತ್ರ-ವಿಡಿಯೋ ಹಂಚಿಕೊಳ್ಳುವ ಅನುಷ್ಕಾ ಶರ್ಮಾ
ಗರ್ಭಿಣಿ ಅನುಷ್ಕಾ ಶರ್ಮಾ ತಮ್ಮ ಸಾಕಷ್ಟು ಚಿತ್ರಗಳು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅದಾಗ್ಯೂ ಅವರು ಎಲ್ಲಿ ಹೋದರೂ ಅವರನ್ನು ಹಿಂಬಾಲಿಸಿ ಅವರ ಖಾಸಗಿ ಕ್ಷಣಗಳನ್ನು ಸಹ ಕ್ಲಿಕ್ಕಿಸಿ ಮುದ್ರಿಸಲಾಗುತ್ತಿದೆ. ಇದು ಅನುಷ್ಕಾ ರಿಗೆ ಬೇಸರ ತಂದಿದೆ.

ಆಸ್ಟ್ರೇಲಿಯಾದಿಂದ ವಾಪಸ್ಸಾಗಿರುವ ವಿರಾಟ್ ಕೊಹ್ಲಿ
ನಟಿ ಅನುಷ್ಕಾ ಶರ್ಮಾ ಇದೇ ತಿಂಗಳಾಂತ್ಯದಲ್ಲಿ ಮಗುವನ್ನು ನಿರೀಕ್ಷಿಸುತ್ತಿದ್ದಾರೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಆಸ್ಟ್ರೇಲಿಯಾ ಪ್ರವಾಸದಿಂದ ರಜೆ ಪಡೆದು ಪತ್ನಿಯೊಂದಿಗೆ ಕಾಲ ಕಳೆಯಲು ಭಾರತಕ್ಕೆ ವಾಪಸ್ಸಾಗಿದ್ದಾರೆ. ಕೆಲವೇ ದಿನಗಳಲ್ಲಿ ಸಿಹಿ ಸುದ್ದಿ ನೀಡಲಿದ್ದಾರೆ ಅನುಷ್ಕಾ.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm