ಬ್ರೇಕಿಂಗ್ ನ್ಯೂಸ್
09-01-21 03:36 pm Source: FILMIBEAT Bharath Kumar K ಸಿನಿಮಾ
ರಾಕಿಂಗ್ ಸ್ಟಾರ್ ಯಶ್ ಜೊತೆ ಶ್ರೀನಿಧಿ ಶೆಟ್ಟಿ ನಟಿಸಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಯೂನಿರ್ವಸಲ್ ವಿಧಾನದಲ್ಲಿ ಕೆಜಿಎಫ್ ಟೀಸರ್ ರಿಲೀಸ್ ಆಗಿದ್ದು, ಭಾರಿ ಮೆಚ್ಚುಗೆ ಪಡೆದುಕೊಂಡಿದೆ. ಈ ಟೀಸರ್ನಲ್ಲಿ ಶ್ರೀನಿಧಿ ಶೆಟ್ಟಿಯ ಲುಕ್ ಸಹ ಅನಾವರಣಗೊಂಡಿದ್ದು, ಕುತೂಹಲ ಮೂಡಿದೆ. ಕೆಜಿಎಫ್ ಗುಂಗಿನಲ್ಲಿರುವಾಗಲೇ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಇನ್ನೊಂದು ಚಿತ್ರ ಟೀಸರ್ ರಿಲೀಸ್ ಆಗಿದೆ. ಸಂಕ್ರಾಂತಿ ಹಬ್ಬದ ವಿಶೇಷವಾಗಿ ಬಿಡುಗಡೆಯಾಗಿರುವ ಟೀಸರ್ನಲ್ಲಿ ಹಲವು ಸರ್ಪ್ರೈಸ್ಗಳಿವೆ.
ಕೋಬ್ರಾ ಟೀಸರ್ ಬಿಡುಗಡೆ
ತಮಿಳು ನಟ ವಿಕ್ರಂ ನಟನೆಯ ಕೋಬ್ರಾ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಕೋಬ್ರಾ ಚಿತ್ರದಲ್ಲಿ ಕೆಜಿಎಫ್ ನಾಯಕಿ ಶ್ರೀನಿಧಿ ಶೆಟ್ಟಿ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದಾರೆ. ಅಜಯ್ ಜ್ಞಾನಮುತ್ತು ಈ ಚಿತ್ರ ನಿರ್ದೇಶಿಸಿದ್ದು, ಎಆರ್ ರೆಹಮಾನ್ ಸಂಗೀತ ಒದಗಿಸಿದ್ದಾರೆ.

ಕ್ಲಾಸ್ ಲುಕ್ನಲ್ಲಿ ಶ್ರೀನಿಧಿ ಶೆಟ್ಟಿ
ಕೆಜಿಎಫ್ ಸಿನಿಮಾದಲ್ಲಿ ರಗಡ್ ಆಗಿ ಕಾಣಿಸಿಕೊಂಡಿದ್ದ ಶ್ರೀನಿಧಿ ಶೆಟ್ಟಿ ಕೋಬ್ರಾ ಸಿನಿಮಾದಲ್ಲಿ ಕ್ಲಾಸ್ ಆಗಿ ನಟಿಸಿದ್ದಾರೆ. ಸಿಂಪಲ್ ಆಗಿ ಸಂಪ್ರದಾಯಸ್ಥ ಹುಡುಗಿಯಾಗಿ ಅಭಿನಯಿಸಿದ್ದಾರೆ. ಕೆಜಿಎಫ್ ಪಾತ್ರಕ್ಕೂ ಕೋಬ್ರಾ ಸಿನಿಮಾದ ಪಾತ್ರಕ್ಕೂ ಅಜಗಜಾಂತರ ವ್ಯತ್ಯಾಸ ಕಂಡು ಬರುತ್ತಿದೆ.

ಕ್ರಿಕೆಟರ್ ಇರ್ಫಾನ್ ಪಠಾಣ್
ಸರ್ಪ್ರೈಸ್ ಎಂಬಂತೆ ಕೋಬ್ರಾ ಚಿತ್ರದಲ್ಲಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪೊಲೀಸ್ ಆಫೀಸರ್ ಪಾತ್ರದಲ್ಲಿ ಪಠಾಣ್ ಕಾಣಿಸಿಕೊಂಡಿದ್ದು, ಕುತೂಹಲ ಹೆಚ್ಚಿಸಿದೆ.

ಪಠಾಣ್ ಮೊದಲ ಚಿತ್ರ, ಶ್ರೀನಿಧಿ ಮೂರನೇ ಚಿತ್ರ
ಬಹುಮುಖ ಪ್ರತಿಭೆ ವಿಕ್ರಂ ಈ ಚಿತ್ರದಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇರ್ಫಾನ್ ಪಠಾಣ್ ಅವರ ಚೊಚ್ಚಲ ಸಿನಿಮಾ ಇದು. ಕೆಜಿಎಫ್ ಬಳಿಕ ಶ್ರೀನಿಧಿ ಶೆಟ್ಟಿ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಸೋನಿ ಪಿಕ್ಚರ್ಸ್ ಈ ಚಿತ್ರ ನಿರ್ಮಿಸಿದ್ದು ಬಿಡುಗಡೆಗೆ ಬಗ್ಗೆ ಮಾಹಿತಿ ನೀಡಿಲ್ಲ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm