ಬ್ರೇಕಿಂಗ್ ನ್ಯೂಸ್
09-01-21 03:41 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಚಿತ್ರೀಕರಣ ಮುಕ್ತಾಯ ಗೊಳಿಸಿದ್ದಾರೆ. ಆಮೀರ್ ಖಾನ್ ಅವರನ್ನು ತೆರೆಮೇಲೆ ನೋಡದೆ ಎರಡು ವರ್ಷದ ಮೇಲಾಗಿದೆ. ಥಗ್ಸ್ ಆಫ್ ಹಿಂದೂಸ್ತಾನ್ ಸೋತ ಬಳಿಕ ಆಮೀರ್ ಖಾನ್ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಲಾಲ್ ಸಿಂಗ್ ಚಡ್ಡಾ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಆಮೀರ್ ಖಾನ್ ಸಿದ್ಧರಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿ ಮುಗಿಸಿರುವ ಮಿಸ್ಟರ್ ಪರ್ಫೆಕ್ಷನಿಸ್ಟ್ ಸದ್ಯ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ.
ಈ ನಡುವೆ ಆಮೀರ್ ಖಾನ್ ಮುಂಬೈನಲ್ಲಿ ಮಕ್ಕಳ ಜೊತೆ ಗಲ್ಲಿ ಕ್ರಿಕೆಟ್ ಆಗಿ ಗಮನ ಸೆಳೆದಿದ್ದಾರೆ. ಹೌದು, ಅಮೀರ್ ಖಾನ್ ಮಕ್ಕಳ ಜೊತೆ ಸೇರಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಮೀರ್ ಖಾನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆಮೀರ್ ಖಾನ್ ಸೇರಿದಂತೆ ಕ್ರಿಕೆಟ್ ಆಡುತ್ತಿರುವ ಮಕ್ಕಳು ಸಹ ಮಾಸ್ಕ್ ಧರಿಸಿಲ್ಲ ಎಂದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಬ್ಬ ಸ್ಟಾರ್ ನಟನಾಗಿ, ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಆಮೀರ್ ಖಾನ್ ಉಳಿದವರಿಗೆ ಮಾದರಿಯಾಗಬೇಕು. ಆದರೆ ಬುದ್ದಿಹೇಳಬೇಕಾದವರೇ ಮೈ ಮರೆತು ಇಂಥ ಕೆಲಸ ಮಾಡಿದರೆ ಉಳಿದವರಿಗೆ ಏನು ಸಂದೇಶ ರವಾನಿಸುತ್ತಾರೆ ಎಂದು ಪ್ರಶ್ನಿಸುತ್ತಿದ್ದಾರೆ. ಮಕ್ಕಳ ಜೊತೆ ಕೆಲವು ಸಮಯ ಕ್ರಿಕೆಟ್ ಆಡಿ, ಬಳಿಕ ಅವರ ಜೊತೆ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಈ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಮಾಸ್ಕ್ ಧರಿಸಿಲ್ಲ ಎಂದು ಟ್ರೋಲ್ ಮಾಡಿದರೆ ಇನ್ನು ಕೆಲವರು ಆಮೀರ್ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ಕ್ರಿಕೆಟ್ ಆಡುವಾಗ ಉಸಿರಾಡಬೇಕು. ಆ ಸಮಯದಲ್ಲಿ ಮಾಸ್ಕ್ ಧರಿಸಿದರೆ ಉಸಿರಾಡಲು ಸಾಧ್ಯವಾಗಿಲ್ಲ, ಹಾಗಾಗಿ ಧರಿಸಿಲ್ಲ ಎಂದಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm