ಬ್ರೇಕಿಂಗ್ ನ್ಯೂಸ್
09-01-21 03:41 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಚಿತ್ರೀಕರಣ ಮುಕ್ತಾಯ ಗೊಳಿಸಿದ್ದಾರೆ. ಆಮೀರ್ ಖಾನ್ ಅವರನ್ನು ತೆರೆಮೇಲೆ ನೋಡದೆ ಎರಡು ವರ್ಷದ ಮೇಲಾಗಿದೆ. ಥಗ್ಸ್ ಆಫ್ ಹಿಂದೂಸ್ತಾನ್ ಸೋತ ಬಳಿಕ ಆಮೀರ್ ಖಾನ್ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಲಾಲ್ ಸಿಂಗ್ ಚಡ್ಡಾ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಆಮೀರ್ ಖಾನ್ ಸಿದ್ಧರಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿ ಮುಗಿಸಿರುವ ಮಿಸ್ಟರ್ ಪರ್ಫೆಕ್ಷನಿಸ್ಟ್ ಸದ್ಯ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ.
ಈ ನಡುವೆ ಆಮೀರ್ ಖಾನ್ ಮುಂಬೈನಲ್ಲಿ ಮಕ್ಕಳ ಜೊತೆ ಗಲ್ಲಿ ಕ್ರಿಕೆಟ್ ಆಗಿ ಗಮನ ಸೆಳೆದಿದ್ದಾರೆ. ಹೌದು, ಅಮೀರ್ ಖಾನ್ ಮಕ್ಕಳ ಜೊತೆ ಸೇರಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಮೀರ್ ಖಾನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆಮೀರ್ ಖಾನ್ ಸೇರಿದಂತೆ ಕ್ರಿಕೆಟ್ ಆಡುತ್ತಿರುವ ಮಕ್ಕಳು ಸಹ ಮಾಸ್ಕ್ ಧರಿಸಿಲ್ಲ ಎಂದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಬ್ಬ ಸ್ಟಾರ್ ನಟನಾಗಿ, ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಆಮೀರ್ ಖಾನ್ ಉಳಿದವರಿಗೆ ಮಾದರಿಯಾಗಬೇಕು. ಆದರೆ ಬುದ್ದಿಹೇಳಬೇಕಾದವರೇ ಮೈ ಮರೆತು ಇಂಥ ಕೆಲಸ ಮಾಡಿದರೆ ಉಳಿದವರಿಗೆ ಏನು ಸಂದೇಶ ರವಾನಿಸುತ್ತಾರೆ ಎಂದು ಪ್ರಶ್ನಿಸುತ್ತಿದ್ದಾರೆ. ಮಕ್ಕಳ ಜೊತೆ ಕೆಲವು ಸಮಯ ಕ್ರಿಕೆಟ್ ಆಡಿ, ಬಳಿಕ ಅವರ ಜೊತೆ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಈ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಮಾಸ್ಕ್ ಧರಿಸಿಲ್ಲ ಎಂದು ಟ್ರೋಲ್ ಮಾಡಿದರೆ ಇನ್ನು ಕೆಲವರು ಆಮೀರ್ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ಕ್ರಿಕೆಟ್ ಆಡುವಾಗ ಉಸಿರಾಡಬೇಕು. ಆ ಸಮಯದಲ್ಲಿ ಮಾಸ್ಕ್ ಧರಿಸಿದರೆ ಉಸಿರಾಡಲು ಸಾಧ್ಯವಾಗಿಲ್ಲ, ಹಾಗಾಗಿ ಧರಿಸಿಲ್ಲ ಎಂದಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am