ಬ್ರೇಕಿಂಗ್ ನ್ಯೂಸ್
10-01-21 02:01 pm Source: FILMIBEAT Manjunatha C ಸಿನಿಮಾ
ಅಪರೂಪಕ್ಕೆ ಇಂದು ನಟ ದರ್ಶನ್ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದರು. ಅವರು ಸಾಮಾಜಿಕ ಜಾಲತಾಣ ಬಳಸುವುದೇ ಕಡಿಮೆ ಅಂಥಹುದರಲ್ಲಿ ದರ್ಶನ್ ಫೇಸ್ಬುಕ್ ಲೈವ್ ಬರುತ್ತಿರುವುದು ಅಭಿಮಾನಿಗಳಿಗೆ ಆಶ್ಚರ್ಯವುಂಟು ಮಾಡಿತ್ತು.
ಅಂತೆಯೇ ದರ್ಶನ್ ಅವರ ಫೇಸ್ಬುಕ್ ಲೈವ್ ಅನ್ನು ಸಾವಿರಾರು ಮಂದಿ ಫೇಸ್ಬುಕ್ನಲ್ಲಿ ನೋಡಿದರು. ಅಪರೂಪಕ್ಕೆ ಲೈವ್ ಬಂದ ದರ್ಶನ್, ಮಹತ್ವವಾದ ಸಂದೇಶವನ್ನು ತಮ್ಮ ಅಭಿಮಾನಿಗಳಿಗೆ ನೀಡಿದರು.
ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದ್ದು, ಆ ದಿನ ಯಾವ ಅಭಿಮಾನಿಗಳೂ ಸಹ ಮನೆಯ ಬಳಿ ಬರಬೇಡಿರೆಂದು ನಟ ದರ್ಶನ್ ಫೇಸ್ಬುಕ್ ಲೈವ್ ನಲ್ಲಿ ಮನವಿ ಮಾಡಿದರು. ಇದೇ ವಿಷಯವನ್ನು ತಿಳಿಸಲೆಂದೇ ತಾವು ಫೇಸ್ಬುಕ್ ಲೈವ್ ಬಂದಿರುವುದಾಗಿ ಹೇಳಿದರು ನಟ ದರ್ಶನ್.

ಕೊರೊನಾ ಕಾರಣದಿಂದಾಗಿ ಯಾರ ಪರಿಸ್ಥಿತಿಯೂ ಚೆನ್ನಾಗಿಲ್ಲ. ಯಾರ ಜೇಬಿನಲ್ಲೂ ಹಣವಿಲ್ಲ. ಅಭಿಮಾನಿಗಳು ನೀವು ಕರ್ನಾಟಕದ ಮೂಲೆ-ಮೂಲೆಗಳಿಂದ ಹಣ, ಸಮಯ ಖರ್ಚು ಮಾಡಿಕೊಂಡು ಹುಟ್ಟುಹಬ್ಬಕ್ಕೆ ಬರುತ್ತೀರ. ಆದರೆ ಈ ವರ್ಷ ಅದು ಬೇಡ ಎಂದರು ದರ್ಶನ್.

ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ, ಅದರ ಮುಂದೆ ಬೇರೆ ಇನ್ನಾವ ಜವಾಬ್ದಾರಿಗಳೂ ಇಲ್ಲ. ನೀವು ಸೆಟ್ಲ್ ಆಗಿ. ಈ ಬಾರಿ ನನ್ನ ಹುಟ್ಟುಹಬ್ಬಕ್ಕೆ ಯಾರೂ ಏನೂ ಆಚರಣೆ ಮಾಡುವುದು ಬೇಡ ಎಲ್ಲಿದ್ದೀರೊ ಅಲ್ಲಿಂದಲೇ ಹಾರೈಸಿ ಸಾಕು ಎಂದು ಮನವಿ ಮಾಡಿದರು ನಟ ದರ್ಶನ್.

ನಾನು ಸಹ ಫೆಬ್ರವರಿ 15 ರಿಂದ 18 ರ ವರೆಗೆ ಊರಿನಲ್ಲಿ ಇರುವುದಿಲ್ಲ. ಅಷ್ಟೇ ಅಲ್ಲದೆ ಮನೆಯ ಬಳಿ ಹುಟ್ಟುಹಬ್ಬ ಆಚರಿಸಲು ಪೊಲೀಸರು ಅನುಮತಿ ಕೊಡುವುದಿಲ್ಲ. ಸಿಸಿಟಿವಿ ಗಳನ್ನು ಹಾಕಿಸಬೇಕಾಗುತ್ತದೆ, ಬ್ಯಾರಿಕೇಡ್ಗಳನ್ನು ಹಾಕಿಸಬೇಕಾಗುತ್ತದೆ. ಈ ಬಾರಿ ಅದೆಲ್ಲ ಯಾವುದು ಬೇಡ, ಮುಂದಿನ ವರ್ಷ ಅದ್ಧೂರಿಯಾಗಿ ಆಚರಿಸೋಣ ಎಂದರು ದರ್ಶನ್
ಪ್ರತಿ ಊರಿಗೆ ನಾನೇ ಹೋಗಿ ಅಭಿಮಾನಿ ಸಂಘಗಳನ್ನು ಭೇಟಿ ಮಾಡುವ ಯೋಚನೆ ಇದೆ. ಆದರೆ ಅದೆಲ್ಲವೂ ಮಾರ್ಚ್ ನಂತರವೇ. ಈ ನಡುವೆ ಭಾನುವಾರಗಳಂದು ನಾನೇ ಕೆಲವು ಸಂಘಗಳಿಗೆ ತಿಳಿಸುತ್ತೇನೆ ಅವರು ಬಂದು ಭೇಟಿ ಮಾಡಬಹುದು ಎಂದು ಮಾಹಿತಿ ನೀಡಿದರು ದರ್ಶನ್.
This News Article is a Copy of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm