ಬ್ರೇಕಿಂಗ್ ನ್ಯೂಸ್
10-01-21 02:01 pm Source: FILMIBEAT Manjunatha C ಸಿನಿಮಾ
ಅಪರೂಪಕ್ಕೆ ಇಂದು ನಟ ದರ್ಶನ್ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದರು. ಅವರು ಸಾಮಾಜಿಕ ಜಾಲತಾಣ ಬಳಸುವುದೇ ಕಡಿಮೆ ಅಂಥಹುದರಲ್ಲಿ ದರ್ಶನ್ ಫೇಸ್ಬುಕ್ ಲೈವ್ ಬರುತ್ತಿರುವುದು ಅಭಿಮಾನಿಗಳಿಗೆ ಆಶ್ಚರ್ಯವುಂಟು ಮಾಡಿತ್ತು.
ಅಂತೆಯೇ ದರ್ಶನ್ ಅವರ ಫೇಸ್ಬುಕ್ ಲೈವ್ ಅನ್ನು ಸಾವಿರಾರು ಮಂದಿ ಫೇಸ್ಬುಕ್ನಲ್ಲಿ ನೋಡಿದರು. ಅಪರೂಪಕ್ಕೆ ಲೈವ್ ಬಂದ ದರ್ಶನ್, ಮಹತ್ವವಾದ ಸಂದೇಶವನ್ನು ತಮ್ಮ ಅಭಿಮಾನಿಗಳಿಗೆ ನೀಡಿದರು.
ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದ್ದು, ಆ ದಿನ ಯಾವ ಅಭಿಮಾನಿಗಳೂ ಸಹ ಮನೆಯ ಬಳಿ ಬರಬೇಡಿರೆಂದು ನಟ ದರ್ಶನ್ ಫೇಸ್ಬುಕ್ ಲೈವ್ ನಲ್ಲಿ ಮನವಿ ಮಾಡಿದರು. ಇದೇ ವಿಷಯವನ್ನು ತಿಳಿಸಲೆಂದೇ ತಾವು ಫೇಸ್ಬುಕ್ ಲೈವ್ ಬಂದಿರುವುದಾಗಿ ಹೇಳಿದರು ನಟ ದರ್ಶನ್.

ಕೊರೊನಾ ಕಾರಣದಿಂದಾಗಿ ಯಾರ ಪರಿಸ್ಥಿತಿಯೂ ಚೆನ್ನಾಗಿಲ್ಲ. ಯಾರ ಜೇಬಿನಲ್ಲೂ ಹಣವಿಲ್ಲ. ಅಭಿಮಾನಿಗಳು ನೀವು ಕರ್ನಾಟಕದ ಮೂಲೆ-ಮೂಲೆಗಳಿಂದ ಹಣ, ಸಮಯ ಖರ್ಚು ಮಾಡಿಕೊಂಡು ಹುಟ್ಟುಹಬ್ಬಕ್ಕೆ ಬರುತ್ತೀರ. ಆದರೆ ಈ ವರ್ಷ ಅದು ಬೇಡ ಎಂದರು ದರ್ಶನ್.

ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ, ಅದರ ಮುಂದೆ ಬೇರೆ ಇನ್ನಾವ ಜವಾಬ್ದಾರಿಗಳೂ ಇಲ್ಲ. ನೀವು ಸೆಟ್ಲ್ ಆಗಿ. ಈ ಬಾರಿ ನನ್ನ ಹುಟ್ಟುಹಬ್ಬಕ್ಕೆ ಯಾರೂ ಏನೂ ಆಚರಣೆ ಮಾಡುವುದು ಬೇಡ ಎಲ್ಲಿದ್ದೀರೊ ಅಲ್ಲಿಂದಲೇ ಹಾರೈಸಿ ಸಾಕು ಎಂದು ಮನವಿ ಮಾಡಿದರು ನಟ ದರ್ಶನ್.

ನಾನು ಸಹ ಫೆಬ್ರವರಿ 15 ರಿಂದ 18 ರ ವರೆಗೆ ಊರಿನಲ್ಲಿ ಇರುವುದಿಲ್ಲ. ಅಷ್ಟೇ ಅಲ್ಲದೆ ಮನೆಯ ಬಳಿ ಹುಟ್ಟುಹಬ್ಬ ಆಚರಿಸಲು ಪೊಲೀಸರು ಅನುಮತಿ ಕೊಡುವುದಿಲ್ಲ. ಸಿಸಿಟಿವಿ ಗಳನ್ನು ಹಾಕಿಸಬೇಕಾಗುತ್ತದೆ, ಬ್ಯಾರಿಕೇಡ್ಗಳನ್ನು ಹಾಕಿಸಬೇಕಾಗುತ್ತದೆ. ಈ ಬಾರಿ ಅದೆಲ್ಲ ಯಾವುದು ಬೇಡ, ಮುಂದಿನ ವರ್ಷ ಅದ್ಧೂರಿಯಾಗಿ ಆಚರಿಸೋಣ ಎಂದರು ದರ್ಶನ್
ಪ್ರತಿ ಊರಿಗೆ ನಾನೇ ಹೋಗಿ ಅಭಿಮಾನಿ ಸಂಘಗಳನ್ನು ಭೇಟಿ ಮಾಡುವ ಯೋಚನೆ ಇದೆ. ಆದರೆ ಅದೆಲ್ಲವೂ ಮಾರ್ಚ್ ನಂತರವೇ. ಈ ನಡುವೆ ಭಾನುವಾರಗಳಂದು ನಾನೇ ಕೆಲವು ಸಂಘಗಳಿಗೆ ತಿಳಿಸುತ್ತೇನೆ ಅವರು ಬಂದು ಭೇಟಿ ಮಾಡಬಹುದು ಎಂದು ಮಾಹಿತಿ ನೀಡಿದರು ದರ್ಶನ್.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm