ಬ್ರೇಕಿಂಗ್ ನ್ಯೂಸ್
10-01-21 02:01 pm Source: FILMIBEAT Manjunatha C ಸಿನಿಮಾ
ಅಪರೂಪಕ್ಕೆ ಇಂದು ನಟ ದರ್ಶನ್ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದರು. ಅವರು ಸಾಮಾಜಿಕ ಜಾಲತಾಣ ಬಳಸುವುದೇ ಕಡಿಮೆ ಅಂಥಹುದರಲ್ಲಿ ದರ್ಶನ್ ಫೇಸ್ಬುಕ್ ಲೈವ್ ಬರುತ್ತಿರುವುದು ಅಭಿಮಾನಿಗಳಿಗೆ ಆಶ್ಚರ್ಯವುಂಟು ಮಾಡಿತ್ತು.
ಅಂತೆಯೇ ದರ್ಶನ್ ಅವರ ಫೇಸ್ಬುಕ್ ಲೈವ್ ಅನ್ನು ಸಾವಿರಾರು ಮಂದಿ ಫೇಸ್ಬುಕ್ನಲ್ಲಿ ನೋಡಿದರು. ಅಪರೂಪಕ್ಕೆ ಲೈವ್ ಬಂದ ದರ್ಶನ್, ಮಹತ್ವವಾದ ಸಂದೇಶವನ್ನು ತಮ್ಮ ಅಭಿಮಾನಿಗಳಿಗೆ ನೀಡಿದರು.
ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದ್ದು, ಆ ದಿನ ಯಾವ ಅಭಿಮಾನಿಗಳೂ ಸಹ ಮನೆಯ ಬಳಿ ಬರಬೇಡಿರೆಂದು ನಟ ದರ್ಶನ್ ಫೇಸ್ಬುಕ್ ಲೈವ್ ನಲ್ಲಿ ಮನವಿ ಮಾಡಿದರು. ಇದೇ ವಿಷಯವನ್ನು ತಿಳಿಸಲೆಂದೇ ತಾವು ಫೇಸ್ಬುಕ್ ಲೈವ್ ಬಂದಿರುವುದಾಗಿ ಹೇಳಿದರು ನಟ ದರ್ಶನ್.

ಕೊರೊನಾ ಕಾರಣದಿಂದಾಗಿ ಯಾರ ಪರಿಸ್ಥಿತಿಯೂ ಚೆನ್ನಾಗಿಲ್ಲ. ಯಾರ ಜೇಬಿನಲ್ಲೂ ಹಣವಿಲ್ಲ. ಅಭಿಮಾನಿಗಳು ನೀವು ಕರ್ನಾಟಕದ ಮೂಲೆ-ಮೂಲೆಗಳಿಂದ ಹಣ, ಸಮಯ ಖರ್ಚು ಮಾಡಿಕೊಂಡು ಹುಟ್ಟುಹಬ್ಬಕ್ಕೆ ಬರುತ್ತೀರ. ಆದರೆ ಈ ವರ್ಷ ಅದು ಬೇಡ ಎಂದರು ದರ್ಶನ್.

ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ, ಅದರ ಮುಂದೆ ಬೇರೆ ಇನ್ನಾವ ಜವಾಬ್ದಾರಿಗಳೂ ಇಲ್ಲ. ನೀವು ಸೆಟ್ಲ್ ಆಗಿ. ಈ ಬಾರಿ ನನ್ನ ಹುಟ್ಟುಹಬ್ಬಕ್ಕೆ ಯಾರೂ ಏನೂ ಆಚರಣೆ ಮಾಡುವುದು ಬೇಡ ಎಲ್ಲಿದ್ದೀರೊ ಅಲ್ಲಿಂದಲೇ ಹಾರೈಸಿ ಸಾಕು ಎಂದು ಮನವಿ ಮಾಡಿದರು ನಟ ದರ್ಶನ್.

ನಾನು ಸಹ ಫೆಬ್ರವರಿ 15 ರಿಂದ 18 ರ ವರೆಗೆ ಊರಿನಲ್ಲಿ ಇರುವುದಿಲ್ಲ. ಅಷ್ಟೇ ಅಲ್ಲದೆ ಮನೆಯ ಬಳಿ ಹುಟ್ಟುಹಬ್ಬ ಆಚರಿಸಲು ಪೊಲೀಸರು ಅನುಮತಿ ಕೊಡುವುದಿಲ್ಲ. ಸಿಸಿಟಿವಿ ಗಳನ್ನು ಹಾಕಿಸಬೇಕಾಗುತ್ತದೆ, ಬ್ಯಾರಿಕೇಡ್ಗಳನ್ನು ಹಾಕಿಸಬೇಕಾಗುತ್ತದೆ. ಈ ಬಾರಿ ಅದೆಲ್ಲ ಯಾವುದು ಬೇಡ, ಮುಂದಿನ ವರ್ಷ ಅದ್ಧೂರಿಯಾಗಿ ಆಚರಿಸೋಣ ಎಂದರು ದರ್ಶನ್
ಪ್ರತಿ ಊರಿಗೆ ನಾನೇ ಹೋಗಿ ಅಭಿಮಾನಿ ಸಂಘಗಳನ್ನು ಭೇಟಿ ಮಾಡುವ ಯೋಚನೆ ಇದೆ. ಆದರೆ ಅದೆಲ್ಲವೂ ಮಾರ್ಚ್ ನಂತರವೇ. ಈ ನಡುವೆ ಭಾನುವಾರಗಳಂದು ನಾನೇ ಕೆಲವು ಸಂಘಗಳಿಗೆ ತಿಳಿಸುತ್ತೇನೆ ಅವರು ಬಂದು ಭೇಟಿ ಮಾಡಬಹುದು ಎಂದು ಮಾಹಿತಿ ನೀಡಿದರು ದರ್ಶನ್.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm