ಬ್ರೇಕಿಂಗ್ ನ್ಯೂಸ್
10-01-21 02:01 pm Source: FILMIBEAT Manjunatha C ಸಿನಿಮಾ
ಅಪರೂಪಕ್ಕೆ ಇಂದು ನಟ ದರ್ಶನ್ ಫೇಸ್ಬುಕ್ ನಲ್ಲಿ ಲೈವ್ ಬಂದಿದ್ದರು. ಅವರು ಸಾಮಾಜಿಕ ಜಾಲತಾಣ ಬಳಸುವುದೇ ಕಡಿಮೆ ಅಂಥಹುದರಲ್ಲಿ ದರ್ಶನ್ ಫೇಸ್ಬುಕ್ ಲೈವ್ ಬರುತ್ತಿರುವುದು ಅಭಿಮಾನಿಗಳಿಗೆ ಆಶ್ಚರ್ಯವುಂಟು ಮಾಡಿತ್ತು.
ಅಂತೆಯೇ ದರ್ಶನ್ ಅವರ ಫೇಸ್ಬುಕ್ ಲೈವ್ ಅನ್ನು ಸಾವಿರಾರು ಮಂದಿ ಫೇಸ್ಬುಕ್ನಲ್ಲಿ ನೋಡಿದರು. ಅಪರೂಪಕ್ಕೆ ಲೈವ್ ಬಂದ ದರ್ಶನ್, ಮಹತ್ವವಾದ ಸಂದೇಶವನ್ನು ತಮ್ಮ ಅಭಿಮಾನಿಗಳಿಗೆ ನೀಡಿದರು.
ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದ್ದು, ಆ ದಿನ ಯಾವ ಅಭಿಮಾನಿಗಳೂ ಸಹ ಮನೆಯ ಬಳಿ ಬರಬೇಡಿರೆಂದು ನಟ ದರ್ಶನ್ ಫೇಸ್ಬುಕ್ ಲೈವ್ ನಲ್ಲಿ ಮನವಿ ಮಾಡಿದರು. ಇದೇ ವಿಷಯವನ್ನು ತಿಳಿಸಲೆಂದೇ ತಾವು ಫೇಸ್ಬುಕ್ ಲೈವ್ ಬಂದಿರುವುದಾಗಿ ಹೇಳಿದರು ನಟ ದರ್ಶನ್.

ಕೊರೊನಾ ಕಾರಣದಿಂದಾಗಿ ಯಾರ ಪರಿಸ್ಥಿತಿಯೂ ಚೆನ್ನಾಗಿಲ್ಲ. ಯಾರ ಜೇಬಿನಲ್ಲೂ ಹಣವಿಲ್ಲ. ಅಭಿಮಾನಿಗಳು ನೀವು ಕರ್ನಾಟಕದ ಮೂಲೆ-ಮೂಲೆಗಳಿಂದ ಹಣ, ಸಮಯ ಖರ್ಚು ಮಾಡಿಕೊಂಡು ಹುಟ್ಟುಹಬ್ಬಕ್ಕೆ ಬರುತ್ತೀರ. ಆದರೆ ಈ ವರ್ಷ ಅದು ಬೇಡ ಎಂದರು ದರ್ಶನ್.

ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ, ಅದರ ಮುಂದೆ ಬೇರೆ ಇನ್ನಾವ ಜವಾಬ್ದಾರಿಗಳೂ ಇಲ್ಲ. ನೀವು ಸೆಟ್ಲ್ ಆಗಿ. ಈ ಬಾರಿ ನನ್ನ ಹುಟ್ಟುಹಬ್ಬಕ್ಕೆ ಯಾರೂ ಏನೂ ಆಚರಣೆ ಮಾಡುವುದು ಬೇಡ ಎಲ್ಲಿದ್ದೀರೊ ಅಲ್ಲಿಂದಲೇ ಹಾರೈಸಿ ಸಾಕು ಎಂದು ಮನವಿ ಮಾಡಿದರು ನಟ ದರ್ಶನ್.

ನಾನು ಸಹ ಫೆಬ್ರವರಿ 15 ರಿಂದ 18 ರ ವರೆಗೆ ಊರಿನಲ್ಲಿ ಇರುವುದಿಲ್ಲ. ಅಷ್ಟೇ ಅಲ್ಲದೆ ಮನೆಯ ಬಳಿ ಹುಟ್ಟುಹಬ್ಬ ಆಚರಿಸಲು ಪೊಲೀಸರು ಅನುಮತಿ ಕೊಡುವುದಿಲ್ಲ. ಸಿಸಿಟಿವಿ ಗಳನ್ನು ಹಾಕಿಸಬೇಕಾಗುತ್ತದೆ, ಬ್ಯಾರಿಕೇಡ್ಗಳನ್ನು ಹಾಕಿಸಬೇಕಾಗುತ್ತದೆ. ಈ ಬಾರಿ ಅದೆಲ್ಲ ಯಾವುದು ಬೇಡ, ಮುಂದಿನ ವರ್ಷ ಅದ್ಧೂರಿಯಾಗಿ ಆಚರಿಸೋಣ ಎಂದರು ದರ್ಶನ್
ಪ್ರತಿ ಊರಿಗೆ ನಾನೇ ಹೋಗಿ ಅಭಿಮಾನಿ ಸಂಘಗಳನ್ನು ಭೇಟಿ ಮಾಡುವ ಯೋಚನೆ ಇದೆ. ಆದರೆ ಅದೆಲ್ಲವೂ ಮಾರ್ಚ್ ನಂತರವೇ. ಈ ನಡುವೆ ಭಾನುವಾರಗಳಂದು ನಾನೇ ಕೆಲವು ಸಂಘಗಳಿಗೆ ತಿಳಿಸುತ್ತೇನೆ ಅವರು ಬಂದು ಭೇಟಿ ಮಾಡಬಹುದು ಎಂದು ಮಾಹಿತಿ ನೀಡಿದರು ದರ್ಶನ್.
This News Article is a Copy of FILMIBEAT
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm