ಬ್ರೇಕಿಂಗ್ ನ್ಯೂಸ್
10-01-21 02:08 pm Source: FILMIBEAT Manjunatha C ಸಿನಿಮಾ
ಖ್ಯಾತ ಗಾಯಕಿ ಸುನಿತಾ ಮದುವೆಯಾಗಿದ್ದಾರೆ. ಮಕ್ಕಳೇ ಮುಂದೆ ನಿಂತು ಅಮ್ಮನ ಮದುವೆಯನ್ನು ನೆರವೇರಿಸಿದ್ದಾರೆ.
43 ವರ್ಷದ ತೆಲುಗಿನ ಖ್ಯಾತ ಗಾಯಕಿ ಸುನಿತಾ ಜನವರಿ 09 ರಂದು ರಾಮ್ ವೀರಪನೇನಿ ಎಂಬುವರನ್ನು ವಿವಾಹವಾಗಿದ್ದಾರೆ. ಗಾಯಕಿ ಸುನಿತಾ ಗೆ ಇದು ಎರಡನೇ ವಿವಾಹ. ಮಕ್ಕಳೇ ಮುಂದೆ ನಿಂತು ಈ ವಿವಾಹ ಕಾರ್ಯ ನೆರವೇರಿಸಿದ್ದಾರೆ.
ಗಾಯಕಿ ಸುನಿತಾ ಹಾಗೂ ರಾಮ್ ವೀರಪನೇನಿ ಅವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಅದ್ಧೂರಿಯಾಗಿಯೇ ನಡೆದ ಈ ಮದುವೆಗೆ ಹಲವು ಅತಿಥಿಗಳು ಭಾಗವಹಿಸಿ, ನವ ವಧು-ವರರಿಗೆ ಶುಭಾಶಯ ತಿಳಿಸಿದ್ದಾರೆ.
19 ವರ್ಷಕ್ಕೆ ಸುನೀತಾಗೆ ಮದುವೆಯಾಗಿತ್ತು
ಸುನಿತಾ ಅವರಿಗೆ 19 ನೇ ವರ್ಷಕ್ಕೆ ಮದುವೆ ಮಾಡಲಾಗಿತ್ತು. ಮೊದಲ ಪತಿ, ಪತ್ರಕರ್ತ ಕಿರಣ್ ಗೋಪುರಾಜು ಇಂದು ವಿಚ್ಛೇಧನ ಪಡೆದು ಹಲವು ವರ್ಷಗಳಾಗಿದ್ದವು ಸುನಿತಾ. ಇದೀಗ ಕೆಲವು ತಿಂಗಳ ಹಿಂದೆ ಮಕ್ಕಳ ಸಮ್ಮುಖದಲ್ಲಿಯೇ ಸುನೀತಾ ಹಾಗೂ ರಾಮ್ ನಿಶ್ಚಿತಾರ್ಥ ಮಾಡಿಕೊಂಡು ಈಗ ಮದುವೆ ಆಗಿದ್ದಾರೆ.

ಡಿಜಿಟಲ್ ಮಿಡಿಯಾ ಸಂಸ್ಥೆಯೊಂದರ ಸಿಇಒ
ರಾಮ್ ವೀರಪನೇನಿ ಡಿಜಿಟಲ್ ಮೀಡಿಯಾ ಸಂಸ್ಥೆಯ ಸಿಇಒ ಆಗಿದ್ದು, 'ನನ್ನ ಬಾಳಿಗೆ ಸ್ನೇಹಿತನಾಗಿ ಬಂದು ಈಗ ನನ್ನ ಜೀವನದ ಭಾಗವೇ ಆಗುತ್ತಿದ್ದಾರೆ ರಾಮ್' ಎಂದು ಹೇಳಿದ್ದಾರೆ ಸುನೀತಾ. ಸುನೀತಾ ಅವರ ಮರು ಮದುವೆ ನಿರ್ಧಾರಕ್ಕೆ ಹಲವಾರು ಮಂದಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಸುನೀತಾ ಗೆ ಇಬ್ಬರು ಮಕ್ಕಳಿದ್ದಾರೆ
ಸುನಿತಾಗೆ ಮತ್ತು ಮೊದಲ ಪತಿ ಕಿರಣ್ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಗ ಆಕಾಶ್ ಮತ್ತು ಮಗಳು ಶ್ರೇಯಾ ಎನ್ನುವ ಇಬ್ಬರು ಮಕ್ಕಳಿದ್ದಾರೆ. ಗಾಯಕಿ ಸುನಿತಾ ತೆಲುಗು ಮಾತ್ರವಲ್ಲದೇ ತಮಿಳು ಮತ್ತು ಕನ್ನಡದಲ್ಲೂ ಸಾಕಷ್ಟು ಹಾಡಿಗಳಿಗೆ ಧ್ವನಿ ನೀಡಿದ್ದಾರೆ.

ಮದುವೆ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು
ಗಾಯಕಿ ಸುನಿತಾ ತಾವು ಮದುವೆ ಆಗುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದಾಗ ಸಾಕಷ್ಟು ಮಂದಿ ಟೀಕಿಸಿದ್ದರು. ಆದರೆ ಎಲ್ಲ ಟೀಕೆಯನ್ನು ನಿರ್ಲಕ್ಷಿಸಿ ಮದುವೆ ಆಗಿದ್ದಾರೆ ಸುನೀತಾ. 'ನನ್ನ ಮಕ್ಕಳು ಸೆಟಲ್ ಆಗಲಿ ಎಂದು ನಾನು ನಿರೀಕ್ಷಿಸುತ್ತೇನೆ. ಆದರೆ ನಾನೂ ಸಹ ಸೆಟಲ್ ಆಗಲಿ ಎಂದು ನನ್ನ ಮಕ್ಕಳು ಯೋಚಿಸಿದ್ದಾರೆ. ಅದ್ಭುತವಾದ ಮಕ್ಕಳನ್ನು ನಾನು ಪಡೆದಿದ್ದೇನೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು ಸುನೀತಾ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am