ಬ್ರೇಕಿಂಗ್ ನ್ಯೂಸ್
10-01-21 02:13 pm Source: FILMIBEAT Manjunatha C ಸಿನಿಮಾ
ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿನ್ನೆ (ಜನವರಿ 09) ರಂದು ಚೆನ್ನೈನಲ್ಲಿ ನಿಧನಹೊಂದಿದ್ದಾರೆ. ಆರ್.ರತ್ನ ಅವರಿಗೆ 97 ವರ್ಷ ವಯಸ್ಸಾಗಿತ್ತು. ಆರ್.ರತ್ನ ನಿಜವಾದ ಹೆಸರು ಜೀವನರತ್ನ.
ಮೊದಲಿಗೆ ನಟನಾಗಿ ವೃತ್ತಿ ಆರಂಭಿಸಿದ ರತ್ನ, ತಮಿಳಿನ 'ದಾನಶೂರ ಕರ್ಣ' ಸಿನಿಮಾದಲ್ಲಿ ಋಷಿ ಕೇತು ಪಾತ್ರದಲ್ಲಿ ನಟಿಸಿದ್ದರು. ನಂತರ 1961ರಲ್ಲಿ ಬಿಡುಗಡೆ ಆದ 'ಚಕ್ರವರ್ತಿ ತಿರುಮಗಲ' ಮೂಲಕ ಸ್ವತಂತ್ರ್ಯ ಸಂಗೀತ ನಿರ್ದೇಶಕರಾದ ಜೀವರತ್ನ. 1963 'ಮನೆ ಕಟ್ಟಿ ನೋಡು' ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶಿಸಿದರು.
ಕನ್ನಡದಲ್ಲಿ ನಮ್ಮ ಊರು, ಬಾಂಧವ್ಯ, ಕಪ್ಪು-ಬಿಳುಪು, ಭಲೇ ಜೋಡಿ, ಪೂರ್ಣಿಮಾ ಮೊದಲಾದ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದರು ಜೀವರತ್ನ ಅಲಿಯಾಸ್ ಆರ್.ರತ್ನ.
ವಯಸ್ಸಾದ ಅವರನ್ನು ಅವರ ಅಭಿಮಾನಿಯೇ ಬಹುವರ್ಷಗಳಿಂದ ಸಾಕುತ್ತಿದ್ದರು ಎಂಬುದು ವಿಶೇಷ. ಜೀವರತ್ನ ಅವರ ಅಭಿಮಾನಿಯಾದ ವೆಂಕಟರಾಮಯ್ಯ, ಜೀವರತ್ನರನ್ನು ಮಗುವಿನಂತೆ ನೋಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಜೀವರತ್ನ ಹೆಸರಲ್ಲಿ ಸಂಗೀತ ಶಾಲೆಯೊಂದನ್ನು ಸಹ ಸ್ಥಾಪಿಸಿದ್ದರು.
ಇಳಿಯ ವಯಸ್ಸಿನಲ್ಲೂ ಹಾರ್ಮೊನಿಯಂ ನುಡಿಸುವುದು ಬಿಟ್ಟಿರಲಿಲ್ಲ ಎಂದು ಅವರ ಪರಿಚಯದವರು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಂಡಿದ್ದು, ಹಾರ್ಮೊನಿಯಂ ನುಡಿಸುತ್ತಾ ತಮ್ಮದೇ ಸಂಯೋಜನೆಯ ಹಾಡುಗಳನ್ನು ಹಾಡುತ್ತಿರುತ್ತಿದ್ದರಂತೆ ಜೀವರತ್ನ.
97 ವಯಸ್ಸಿನ ಜೀವರತ್ನ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಚೆನ್ನೈನಲ್ಲಿ ಅವರು ವಿಧಿವಶರಾಗಿದ್ದಾರೆ.
This News Article is a Copy of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm