ಬ್ರೇಕಿಂಗ್ ನ್ಯೂಸ್
10-01-21 02:13 pm Source: FILMIBEAT Manjunatha C ಸಿನಿಮಾ
ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿನ್ನೆ (ಜನವರಿ 09) ರಂದು ಚೆನ್ನೈನಲ್ಲಿ ನಿಧನಹೊಂದಿದ್ದಾರೆ. ಆರ್.ರತ್ನ ಅವರಿಗೆ 97 ವರ್ಷ ವಯಸ್ಸಾಗಿತ್ತು. ಆರ್.ರತ್ನ ನಿಜವಾದ ಹೆಸರು ಜೀವನರತ್ನ.
ಮೊದಲಿಗೆ ನಟನಾಗಿ ವೃತ್ತಿ ಆರಂಭಿಸಿದ ರತ್ನ, ತಮಿಳಿನ 'ದಾನಶೂರ ಕರ್ಣ' ಸಿನಿಮಾದಲ್ಲಿ ಋಷಿ ಕೇತು ಪಾತ್ರದಲ್ಲಿ ನಟಿಸಿದ್ದರು. ನಂತರ 1961ರಲ್ಲಿ ಬಿಡುಗಡೆ ಆದ 'ಚಕ್ರವರ್ತಿ ತಿರುಮಗಲ' ಮೂಲಕ ಸ್ವತಂತ್ರ್ಯ ಸಂಗೀತ ನಿರ್ದೇಶಕರಾದ ಜೀವರತ್ನ. 1963 'ಮನೆ ಕಟ್ಟಿ ನೋಡು' ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶಿಸಿದರು.
ಕನ್ನಡದಲ್ಲಿ ನಮ್ಮ ಊರು, ಬಾಂಧವ್ಯ, ಕಪ್ಪು-ಬಿಳುಪು, ಭಲೇ ಜೋಡಿ, ಪೂರ್ಣಿಮಾ ಮೊದಲಾದ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದರು ಜೀವರತ್ನ ಅಲಿಯಾಸ್ ಆರ್.ರತ್ನ.
ವಯಸ್ಸಾದ ಅವರನ್ನು ಅವರ ಅಭಿಮಾನಿಯೇ ಬಹುವರ್ಷಗಳಿಂದ ಸಾಕುತ್ತಿದ್ದರು ಎಂಬುದು ವಿಶೇಷ. ಜೀವರತ್ನ ಅವರ ಅಭಿಮಾನಿಯಾದ ವೆಂಕಟರಾಮಯ್ಯ, ಜೀವರತ್ನರನ್ನು ಮಗುವಿನಂತೆ ನೋಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಜೀವರತ್ನ ಹೆಸರಲ್ಲಿ ಸಂಗೀತ ಶಾಲೆಯೊಂದನ್ನು ಸಹ ಸ್ಥಾಪಿಸಿದ್ದರು.
ಇಳಿಯ ವಯಸ್ಸಿನಲ್ಲೂ ಹಾರ್ಮೊನಿಯಂ ನುಡಿಸುವುದು ಬಿಟ್ಟಿರಲಿಲ್ಲ ಎಂದು ಅವರ ಪರಿಚಯದವರು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಂಡಿದ್ದು, ಹಾರ್ಮೊನಿಯಂ ನುಡಿಸುತ್ತಾ ತಮ್ಮದೇ ಸಂಯೋಜನೆಯ ಹಾಡುಗಳನ್ನು ಹಾಡುತ್ತಿರುತ್ತಿದ್ದರಂತೆ ಜೀವರತ್ನ.
97 ವಯಸ್ಸಿನ ಜೀವರತ್ನ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಚೆನ್ನೈನಲ್ಲಿ ಅವರು ವಿಧಿವಶರಾಗಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm