ಬ್ರೇಕಿಂಗ್ ನ್ಯೂಸ್
11-01-21 11:45 am Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರ ವಲ್ಲದೇ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ರಚಿತಾ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಕೃಷ್ಣಗೆ ಬೇಡಿಕೆ ಜಾಸ್ತಿ ಆಗಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕನಾಗಿ ನಟಿಸುವ ಜೊತೆಗೆ ಲವ್ ಮಾಕ್ ಟೇಲ್-2 ಸಿನಿಮಾದ ನಿರ್ದೇಶನದಲ್ಲೂ ಕೃಷ್ಣ ನಿರತರಾಗಿದ್ದಾರೆ.
ಈ ನಡುವೆ ರಚಿತಾ ರಾಮ್ ಜೊತೆ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿ ಅಚ್ಚರಿ ಮೂಡಿಸಿದೆ. ಮೊದಲ ಬಾರಿಗೆ ರಚಿತಾ ಮತ್ತು ಡಾರ್ಲಿಂಗ್ ಕೃಷ್ಣ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಅಂದಹಾಗೆ ಇಬ್ಬರನ್ನು ಒಟ್ಟಿಗೆ ಕರೆತರುತ್ತಿದ್ದಾರೆ. ನಿರ್ದೇಶಕ ದೀಪಕ್ ಗಂಗಾಧರ್. ದೀಪಕ್ ಗೆ ಇದು ಚೊಚ್ಚಲ ಸಿನಿಮಾ. ಪಕ್ಕ ಲವ್ ಸ್ಟೋರಿ ಸಿನಿಮಾ ಇದಾಗಿದ್ದು, ಇನ್ನು ಟೈಟಲ್ ಬಹಿರಂಗ ಪಡಿಸಿಲ್ಲ.

ರೊಮ್ಯಾಂಟಿಕ್ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ ಶ್ರೀಧರ್ ವಿ ಸಂಭ್ರಮ್. ಉಳಿದಂತೆ ಪಾತ್ರವರ್ಗ ಮತ್ತು ತಂತ್ರಜ್ಞರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಈ ಸಿನಿಮಾ ಏಪ್ರಿಲ್ ಅಥವಾ ಮಾರ್ಚ್ ತಿಂಗಳಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ. ಡಾರ್ಲಿಂಗ್ ಕೃಷ್ಣ ಸದ್ಯ ಶ್ರೀಕೃಷ್ಣ@ಜಿಮೇಲ್.ಕಾಮ್, MR.ಬ್ಯಾಚುಲರ್, ಶುಗರ್ ಫ್ಯಾಕ್ಟರಿ ಮತ್ತು ಲವ್ ಮಾಕ್ ಟೇಲ್-2ನಲ್ಲಿ ನಿರತರಾಗಿದ್ದಾರೆ. ಜನವರಿ 22ರಿಂದ ಶುಗರ್ ಫ್ಯಾಕ್ಟರಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸಿನಿಮಾಗಳ ಜೊತೆಗೆ ಕೃಷ್ಣ ಮದುವೆ ತಯಾರಿಯಲ್ಲಿದ್ದಾರೆ. ಫೆಬ್ರವರಿ 14ರಂದು ಡಾರ್ಲಿಂಗ್ ಕೃಷ್ಣ ಬಹುಕಾಲದ ಗೆಳತಿ, ನಟಿ ಮಿಲನಾ ನಾಗರಾಜ್ ಜೊತೆ ಹಸೆಮಣೆ ಏರುತ್ತಿದ್ದಾರೆ.
ಇನ್ನು ನಟಿ ರಚಿತಾ ರಾಮ್ ಬಳಿಯೂ ಸಾಲು ಸಾಲು ಸಿನಿಮಾಗಳಿವೆ. ಸದ್ಯ ರಚಿತಾ, ಪ್ರಜ್ವಲ್ ದೇವರಾಜ್ ಜೊತೆ ವೀರಂ ಸಿನಿಮಾದಲ್ಲಿ ನಿರತರಾಗಿದ್ದಾರೆ. ಮೊದಲ ಬಾರಿಗೆ ಪ್ರಜ್ವಲ್ ಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ. ಖಾದರು ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm