ಬ್ರೇಕಿಂಗ್ ನ್ಯೂಸ್
11-01-21 11:45 am Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರ ವಲ್ಲದೇ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ರಚಿತಾ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಕೃಷ್ಣಗೆ ಬೇಡಿಕೆ ಜಾಸ್ತಿ ಆಗಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕನಾಗಿ ನಟಿಸುವ ಜೊತೆಗೆ ಲವ್ ಮಾಕ್ ಟೇಲ್-2 ಸಿನಿಮಾದ ನಿರ್ದೇಶನದಲ್ಲೂ ಕೃಷ್ಣ ನಿರತರಾಗಿದ್ದಾರೆ.
ಈ ನಡುವೆ ರಚಿತಾ ರಾಮ್ ಜೊತೆ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿ ಅಚ್ಚರಿ ಮೂಡಿಸಿದೆ. ಮೊದಲ ಬಾರಿಗೆ ರಚಿತಾ ಮತ್ತು ಡಾರ್ಲಿಂಗ್ ಕೃಷ್ಣ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಅಂದಹಾಗೆ ಇಬ್ಬರನ್ನು ಒಟ್ಟಿಗೆ ಕರೆತರುತ್ತಿದ್ದಾರೆ. ನಿರ್ದೇಶಕ ದೀಪಕ್ ಗಂಗಾಧರ್. ದೀಪಕ್ ಗೆ ಇದು ಚೊಚ್ಚಲ ಸಿನಿಮಾ. ಪಕ್ಕ ಲವ್ ಸ್ಟೋರಿ ಸಿನಿಮಾ ಇದಾಗಿದ್ದು, ಇನ್ನು ಟೈಟಲ್ ಬಹಿರಂಗ ಪಡಿಸಿಲ್ಲ.

ರೊಮ್ಯಾಂಟಿಕ್ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ ಶ್ರೀಧರ್ ವಿ ಸಂಭ್ರಮ್. ಉಳಿದಂತೆ ಪಾತ್ರವರ್ಗ ಮತ್ತು ತಂತ್ರಜ್ಞರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಈ ಸಿನಿಮಾ ಏಪ್ರಿಲ್ ಅಥವಾ ಮಾರ್ಚ್ ತಿಂಗಳಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ. ಡಾರ್ಲಿಂಗ್ ಕೃಷ್ಣ ಸದ್ಯ ಶ್ರೀಕೃಷ್ಣ@ಜಿಮೇಲ್.ಕಾಮ್, MR.ಬ್ಯಾಚುಲರ್, ಶುಗರ್ ಫ್ಯಾಕ್ಟರಿ ಮತ್ತು ಲವ್ ಮಾಕ್ ಟೇಲ್-2ನಲ್ಲಿ ನಿರತರಾಗಿದ್ದಾರೆ. ಜನವರಿ 22ರಿಂದ ಶುಗರ್ ಫ್ಯಾಕ್ಟರಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸಿನಿಮಾಗಳ ಜೊತೆಗೆ ಕೃಷ್ಣ ಮದುವೆ ತಯಾರಿಯಲ್ಲಿದ್ದಾರೆ. ಫೆಬ್ರವರಿ 14ರಂದು ಡಾರ್ಲಿಂಗ್ ಕೃಷ್ಣ ಬಹುಕಾಲದ ಗೆಳತಿ, ನಟಿ ಮಿಲನಾ ನಾಗರಾಜ್ ಜೊತೆ ಹಸೆಮಣೆ ಏರುತ್ತಿದ್ದಾರೆ.
ಇನ್ನು ನಟಿ ರಚಿತಾ ರಾಮ್ ಬಳಿಯೂ ಸಾಲು ಸಾಲು ಸಿನಿಮಾಗಳಿವೆ. ಸದ್ಯ ರಚಿತಾ, ಪ್ರಜ್ವಲ್ ದೇವರಾಜ್ ಜೊತೆ ವೀರಂ ಸಿನಿಮಾದಲ್ಲಿ ನಿರತರಾಗಿದ್ದಾರೆ. ಮೊದಲ ಬಾರಿಗೆ ಪ್ರಜ್ವಲ್ ಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ. ಖಾದರು ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm