ಬ್ರೇಕಿಂಗ್ ನ್ಯೂಸ್
11-01-21 01:08 pm Source: FILMIBEAT Manjunatha C ಸಿನಿಮಾ
ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಕುರಿತು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿದ್ದು. ಸುಳ್ಳು ಸುದ್ದಿ ಪ್ರಕಟಿಸಿರುವ ಯೂಟ್ಯೂಬ್ ಚಾನೆಲ್ ಮೇಲೆ ಗರಂ ಆಗಿದ್ದಾರೆ ರಘು ದೀಕ್ಷಿತ್. 'ರಘು ದೀಕ್ಷಿತ್ ಆತ್ಮಹತ್ಯೆ, ಕಣ್ಣೀರಿನಲ್ಲಿ ಕನ್ನಡ ಚಿತ್ರರಂಗ, ಏನಾಯ್ತು?' ಎಂಬ ಹೆಡ್ಲೈನ್ ನೀಡಿ ಯೂಟ್ಯೂಬ್ ಚಾನೆಲ್ ಒಂದು ಸುದ್ದಿಯೊಂದನ್ನು ಪ್ರಕಟಿಸಿದೆ.
ಆದರೆ ವಿಡಿಯೋನಲ್ಲಿ 'ರಘು ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಹೇಳಿಲ್ಲ. ಬದಲಿಗೆ ರಘು ದೀಕ್ಷಿತ್ ಖಿನ್ನತೆಗೆ ಒಳಗಾಗಿದ್ದರು. ಈ ವಿಷಯವನ್ನು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಿದ್ದಾರೆ. ಆದರೆ ಹೆಡ್ಲೈನ್ ನಲ್ಲಿ ಮಾತ್ರ 'ರಘು ದೀಕ್ಷಿತ್ ಆತ್ಮಹತ್ಯೆ' ಎಂದು ದೊಡ್ಡದಾಗಿ ಹಾಕಿ ಓದುಗರು ದಾರಿ ತಪ್ಪುವಂತೆ ಮಾಡಿದ್ದಾರೆ.
ಯೂಟ್ಯೂಬ್ ಚಾನೆಲ್ನ ವಿಡಿಯೋದ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ರಘು ದೀಕ್ಷಿತ್, 'ಜೀವನದಲ್ಲಿ ಸಾಕಷ್ಟು ನೋಡಿದ್ದೇನೆ, ಆದರೆ ಇದು ಎಲ್ಲವನ್ನೂ ಮೀರಿಸಿದ್ದು' ಎಂದು ವ್ಯಂಗ್ಯ ಮಾಡಿದ್ದಾರೆ. ಜೊತೆಗೆ ಈ ಚಾನೆಲ್ ವಿರುದ್ಧ ದೂರು ನೀಡುವುದು ಹೇಗೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.
'ಫಿಲ್ಮ್ ತಂತ್ರ24' ಹೆಸರಿನ ಯೂಟ್ಯೂಬ್ ಚಾನೆಲ್ನವರು ಈ ಸುದ್ದಿ ಪ್ರಕಟಿಸಿದ್ದಾರೆ. ರಘು ದೀಕ್ಷಿತ್ ಮಾತ್ರವೇ ಅಲ್ಲದೆ. ಇನ್ನೂ ಕೆಲವರ ಬಗ್ಗೆ ಸುಳ್ಳು ಸುದ್ದಿಗಳನ್ನು ಈ ಚಾನೆಲ್ ಪ್ರಕಟಿಸಿದೆ. ನಟಿ ಅಮೂಲ್ಯಗೆ ಅಪಘಾತವಾಗಿದೆ ಎಂಬ ಸುದ್ದಿಯನ್ನು ಸಹ ಈ ಯೂಟ್ಯೂಬ್ ಚಾನೆಲ್ ಪ್ರಕಟಿಸಿದೆ.
ನಟ ರಘು ದೀಕ್ಷಿತ್ ಇತ್ತೀಚೆಗೆ ನಿರೂಪಕಿ ಅನುಶ್ರೀಗೆ ಸಂದರ್ಶನವೊಂದನ್ನು ನೀಡಿದ್ದರು. ಸಂದರ್ಶನದಲ್ಲಿ ತಾವು ಖಿನ್ನತೆಗೆ ಒಳಗಾಗಿದ್ದುದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯವಹಿಸಿದ್ದಾಗಿ ಹೇಳಿದ್ದರು. ಇದನ್ನೇ ಇಟ್ಟುಕೊಂಡು ಈ ಯೂಟ್ಯೂಬ್ ಚಾನೆಲ್ ಹೀಗೆ ತಿರುಚಿದ, ದಾರಿ ತಪ್ಪಿಸುವ ಸುದ್ದಿಯನ್ನು ಪ್ರಕಟಿಸಿದೆ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 05:20 pm
Bangalore Correspondent
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm