ಬ್ರೇಕಿಂಗ್ ನ್ಯೂಸ್
11-01-21 01:08 pm Source: FILMIBEAT Manjunatha C ಸಿನಿಮಾ
ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಕುರಿತು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿದ್ದು. ಸುಳ್ಳು ಸುದ್ದಿ ಪ್ರಕಟಿಸಿರುವ ಯೂಟ್ಯೂಬ್ ಚಾನೆಲ್ ಮೇಲೆ ಗರಂ ಆಗಿದ್ದಾರೆ ರಘು ದೀಕ್ಷಿತ್. 'ರಘು ದೀಕ್ಷಿತ್ ಆತ್ಮಹತ್ಯೆ, ಕಣ್ಣೀರಿನಲ್ಲಿ ಕನ್ನಡ ಚಿತ್ರರಂಗ, ಏನಾಯ್ತು?' ಎಂಬ ಹೆಡ್ಲೈನ್ ನೀಡಿ ಯೂಟ್ಯೂಬ್ ಚಾನೆಲ್ ಒಂದು ಸುದ್ದಿಯೊಂದನ್ನು ಪ್ರಕಟಿಸಿದೆ.
ಆದರೆ ವಿಡಿಯೋನಲ್ಲಿ 'ರಘು ದೀಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಹೇಳಿಲ್ಲ. ಬದಲಿಗೆ ರಘು ದೀಕ್ಷಿತ್ ಖಿನ್ನತೆಗೆ ಒಳಗಾಗಿದ್ದರು. ಈ ವಿಷಯವನ್ನು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಿದ್ದಾರೆ. ಆದರೆ ಹೆಡ್ಲೈನ್ ನಲ್ಲಿ ಮಾತ್ರ 'ರಘು ದೀಕ್ಷಿತ್ ಆತ್ಮಹತ್ಯೆ' ಎಂದು ದೊಡ್ಡದಾಗಿ ಹಾಕಿ ಓದುಗರು ದಾರಿ ತಪ್ಪುವಂತೆ ಮಾಡಿದ್ದಾರೆ.
ಯೂಟ್ಯೂಬ್ ಚಾನೆಲ್ನ ವಿಡಿಯೋದ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ರಘು ದೀಕ್ಷಿತ್, 'ಜೀವನದಲ್ಲಿ ಸಾಕಷ್ಟು ನೋಡಿದ್ದೇನೆ, ಆದರೆ ಇದು ಎಲ್ಲವನ್ನೂ ಮೀರಿಸಿದ್ದು' ಎಂದು ವ್ಯಂಗ್ಯ ಮಾಡಿದ್ದಾರೆ. ಜೊತೆಗೆ ಈ ಚಾನೆಲ್ ವಿರುದ್ಧ ದೂರು ನೀಡುವುದು ಹೇಗೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.

'ಫಿಲ್ಮ್ ತಂತ್ರ24' ಹೆಸರಿನ ಯೂಟ್ಯೂಬ್ ಚಾನೆಲ್ನವರು ಈ ಸುದ್ದಿ ಪ್ರಕಟಿಸಿದ್ದಾರೆ. ರಘು ದೀಕ್ಷಿತ್ ಮಾತ್ರವೇ ಅಲ್ಲದೆ. ಇನ್ನೂ ಕೆಲವರ ಬಗ್ಗೆ ಸುಳ್ಳು ಸುದ್ದಿಗಳನ್ನು ಈ ಚಾನೆಲ್ ಪ್ರಕಟಿಸಿದೆ. ನಟಿ ಅಮೂಲ್ಯಗೆ ಅಪಘಾತವಾಗಿದೆ ಎಂಬ ಸುದ್ದಿಯನ್ನು ಸಹ ಈ ಯೂಟ್ಯೂಬ್ ಚಾನೆಲ್ ಪ್ರಕಟಿಸಿದೆ.
ನಟ ರಘು ದೀಕ್ಷಿತ್ ಇತ್ತೀಚೆಗೆ ನಿರೂಪಕಿ ಅನುಶ್ರೀಗೆ ಸಂದರ್ಶನವೊಂದನ್ನು ನೀಡಿದ್ದರು. ಸಂದರ್ಶನದಲ್ಲಿ ತಾವು ಖಿನ್ನತೆಗೆ ಒಳಗಾಗಿದ್ದುದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯವಹಿಸಿದ್ದಾಗಿ ಹೇಳಿದ್ದರು. ಇದನ್ನೇ ಇಟ್ಟುಕೊಂಡು ಈ ಯೂಟ್ಯೂಬ್ ಚಾನೆಲ್ ಹೀಗೆ ತಿರುಚಿದ, ದಾರಿ ತಪ್ಪಿಸುವ ಸುದ್ದಿಯನ್ನು ಪ್ರಕಟಿಸಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm